Monday, May 4, 2026
Monday, May 4, 2026

Dr. Parameshwar ಇನ್ನು ಮುಂದೆ ವರ್ಷಕ್ಕೆ ಮೂರು ಬಾರಿ ಸನ್ನಡತೆ ಆಧಾರದ ಮೇಲೆ ಖೈದಿಗಳ ಬಿಡುಗಡೆ- ಸಚಿವ ಡಾ.ಪರಮೇಶ್ವರ್

Date:

Dr. Parameshwar ರಾಜ್ಯದ ವಿವಿಧ ಜೈಲುಗಳಲ್ಲಿರುವ 77 ಕೈದಿಗಳನ್ನು ಮಂಗಳವಾರ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಯಿತು.

ಸನ್ನಡತೆ ಆಧಾರದ ವರ್ಷದಲ್ಲಿ ಮೂರು ಬಾರಿ ಜೈಲಿನ ಕೈದಿಗಳನ್ನು ಬಿಡುಗಡೆಗೊಳಿಸುವ ಆದೇಶದನ್ವಯ, ರಾಜ್ಯ ಸರ್ಕಾರದ ಶಿಫಾರಸಿನ ಮೇರೆಗೆ 77 ಕೈದಿಗಳನ್ನು ಅವಧಿಪೂರ್ವ ಬಿಡುಗಡೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಗೃಹ ಸಚಿವ ಪರಮೇಶ್ವರ ಅವರ ನೇತೃತ್ವದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳನ್ನು ಬಿಡುಗಡೆ ಮಾಡಲಾಯಿತು.
ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ಇನ್ನುಮುಂದೆ ಸನ್ನಡತೆ ಆಧಾರದ ಮೇಲೆ ವರ್ಷಕ್ಕೆ ಎರಡು ಬಾರಿ ಬದಲು ಮೂರು ಬಾರಿ ಕೈದಿಗಳನ್ನು ಬಂಧಮುಕ್ತಗೊಳಿಸಲಾಗುವುದು ಎಂದರು. ಈಗ ವರ್ಷಕ್ಕೆ ಎರಡು ಬಾರಿ ಸ್ವಾತಂತ್ರ್ಯೋತ್ಸವದ ವೇಳೆ ಮತ್ತು ಗಣರಾಜ್ಯೋತ್ಸವದ ವೇಳೆ ಮಾತ್ರ ಸನ್ನಡತೆ ಆಧಾರದ ಮೇಲೆ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ.
Dr. Parameshwar ಹೈಕೋರ್ಟ್ ಆದೇಶದ ಮೇರೆಗೆ ಸನ್ನಡತೆ ತೋರಿದ ಬಂಧಿಗಳು ಬಿಡುಗಡೆಗೆ ಅವಕಾಶ ಇದೆ. ಇಂದು ಕಾರಾಗೃಹದಲ್ಲಿದ್ದ 77 ಜನರನ್ನು ಬಿಡುಗಡೆ ಮಾಡಲಾಗಿದೆ. 10, 15 ವರ್ಷ ಜೈಲಿನಲ್ಲೇ ಜೀವನ ಕಳೆದು ಸನ್ನಡತೆ ಕಂಡುಕೊಂಡಿದ್ದಾರೆ. ಒಂದೇ ದಿನದಲ್ಲಿ ಸನ್ನಡತೆ ಪರಿಗಣಿಸಲ್ಲ. ಅದಕ್ಕೆ ಆದ ಕೆಲ ಮಾನದಂಡಗಳು ಇವೆ. ಜೈಲಿನಲ್ಲಿ ಯಾವ ರೀತಿ ನಡೆದುಕೊಂಡಿದ್ದಾರೆ?, ಪರಿವರ್ತನೆಯಾಗಿದ್ದಾರೆ?, ಸಮಾಜದ ನಡುವೆ ಯಾವ ರೀತಿ ಅವರು ಇರಲಿದ್ದಾರೆ ಎಂಬುವುದನ್ನು ಮನನ ಮಾಡಿಕೊಳ್ಳಲಾಗುತ್ತದೆ. ನಂತರ ಸಮಿತಿ ಪರಿಶೀಲನೆ ಮಾಡಿ ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ.

ಈ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನಿಸಿ, ಬಿಡುಗಡೆ ಪಟ್ಟಿಯನ್ನು ರಾಜ್ಯಪಾಲರಿಗೆ ರವಾನಿಸಲಾಗುತ್ತದೆ. ರಾಜ್ಯಪಾಲರ ಅಂಕಿತ ಹಾಕಿದ ನಂತರ ಬಿಡುಗಡೆ ಮಾಡುವುದು ನಿಮಯ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...