Sunday, June 22, 2025
Sunday, June 22, 2025

District Banjara Committee ಶಿವಮೊಗ್ಗ ಜಿಲ್ಲಾ ಬಂಜಾರ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಲು ಆದೇಶ

Date:

District Banjara Committee ಶಿವಮೊಗ್ಗ ಜಿಲ್ಲಾ ಬಂಜಾರಾ ಸಮಿತಿಯವರು ಹಲವು ಸಂದರ್ಭಗಳಲ್ಲಿ ಬೈಲಾ ಮತ್ತು ಕಾಯ್ದೆಯನ್ನು ಉಲ್ಲಂಘಿಸಿರುವುದರಿಂದ ಸಂಘದ ಹಿತದೃಷ್ಟಿಯಿಂದ ಆಡಳಿತಾಧಿಕಾರಿಯನ್ನು ನೇಮಿಸುವುದು ಸೂಕ್ತ ಎಂದು ಹೇಳಿರುವ ಸಹಕಾರ ಇಲಾಖೆಯ ನಿಬಂಧಕ ಕ್ಯಾಪ್ಟನ್ ಕೆ. ರಾಜೇಂದ್ರ, ಈ ಬಗ್ಗೆ ಸೂಕ್ತ ಕ್ರಮ ಜರುಗಿಸುವಂತೆ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಿಗೆ ಸೂಚನೆ ನೀಡಿದ್ದಾರೆ.

ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಗುರುವಾರ ಈ ಬಗ್ಗೆ ಮಾಹಿತಿ ನೀಡಿದ ಬಂಜಾರಾ ಸಂಘದ ಮುಖಂಡದ ಉಮಾಮಹೇಶ್ವರ ನಾಯ್ಕ್ ಮತ್ತು ಶಶಿಕುಮಾರ್ ನಾಯ್ಕ, ಸಂಘ ನಡೆಸಿರುವ ಅಕ್ರಮಗಳ ಬಗ್ಗೆ ಸಹಕಾರ ಇಲಾಖೆಗೆ ದೂರು ಸಲ್ಲಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿಯನ್ನಾಗಿ ಸಹಾಯಕ ನಿಬಂಧಕರನ್ನು ನೇಮಿಸಲಾಗಿತ್ತು. ಅವರು ನೀಡಿರುವ ವರದಿಯ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ ಎಂದರು.

ಸಂಘದ ಆಡಳಿತ ಮಂಡಳಿಯು ವಾರ್ಷಿಕ ಸಭೆಯಲ್ಲಿ ಒಪ್ಪಿಗೆ ಪಡೆದು ನಿಯಮಾನುಸಾರ ನೊಂದಣಾಧಿಕಾರಿಗಳಿಂದ ಬೈಲಾದಲ್ಲಿ ಸೂಕ್ತ ತಿದ್ದುಪಡಿ ಮಾಡಿಕೊಳ್ಳದೆ ಸದಸ್ಯತ್ವವವ್ವನು ೧೦೦ ರೂ. ನಿಂದ ೫೦೦ ರೂ. ಗೆ ಏರಿಸಿದೆ. ಇದರಿಂದ ಬಂದ ಹಣ೨, ೪೯, ೬೦೦ ರೂ. ಆಗಿದೆ.

District Banjara Committee ಶುಲ್ಕ ಹೆಚ್ಚಳ ಸಂಘದ ಬೈಲಾ ಉಲ್ಲಂಘನೆಯಾಗಿದೆ. ಆಡಳಿತ ಮಂಡಳಿಯ ಅವಧಿ ಮುಗಿದಿದ್ದರೂ ಹೊಸ ಮಂqಳಿ ರಚನೆ ಮಾಡದೆ ಕರ್ತವ್ಯಲೋಪ ಮಾಡಲಾಗಿದೆ. ಇದೂ ಸಹ ಬೈಲಾ ಉಲ್ಲಂಘನೆಯಾಗಿದೆ. ದೇಣಿಗೆ ನೀಡಿರುವವರ ವಿವರಕ್ಕೂ, ಸಂಘವು ನೀಡಿರುವ ದಾಖಲಾತಿಗಳ ವಿವರಕ್ಕೂ ವ್ಯತ್ಯಾಸವಿದೆ. ಹಣ ಜಮಾ ಆಗದೇ ಇದ್ದರೂ ತಾಂಡಾಗಳ ಹೆಸರನ್ನು ನಾಮಫಲಕದಲ್ಲಿ ಅಳವಡಿಸಲಾಗಿದೆ.

ಇದಕ್ಕೆ ಆಡಳಿತ ಮಂಡಳಿ ಹೊಣೆ ಎಂದು ಆದೇಶದಲ್ಲಿ ಹೇಳಲಾಗಿದೆ ಎಂದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...