Saturday, May 16, 2026
Saturday, May 16, 2026

Senior Government Primary School ಹಿರಿಯ ವಿದ್ಯಾರ್ಥಿಗಳಿಂದ ತಾವೇ ಓದಿದ ಶಾಲೆಗೆ ಕಂಪ್ಯೂಟರ್ ಸಾಮಗ್ರಿಗಳ ಬಳುವಳಿ

Date:

Senior Government Primary School ತೀರ್ಥಹಳ್ಳಿ ತಾಲೂಕಿನ ಹೊದಲ ಅರಳಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊದಲ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಈ ಹಿಂದೆ ವಿದ್ಯಾಭ್ಯಾಸ ಮಾಡಿದ್ದ ಬಾಳಿಗೆಮನೆ ಬಿ. ಎಸ್. ಅನಂತಮೂರ್ತಿ ಮತ್ತು ವಿದ್ಯಾ ದಂಪತಿಗಳ ಪುತ್ರ ಸಾತ್ವಿಕ್ ಬಿ. ಎ ಮತ್ತು ಹೊದಲ ಶಾಲೆಯ ಹಿರಿಯ ವಿದ್ಯಾರ್ಥಿನಿ ಜಯಂತಿ ಮತ್ತು ಕೃಷ್ಣಯ್ಯ ದಂಪತಿಗಳ ಪುತ್ರ ರಾಕೇಶ್ ವಿ. ಕೆ. ಅವರು ಹೊದಲ ಸರ್ಕಾರಿ ಶಾಲೆಗೆ ಕಂಪ್ಯೂಟರ್, ಪ್ರಿಂಟರ್ ಹಾಗೂ ಯುಪಿಎಸ್ ಗಳನ್ನು ಕೊಡುಗೆಯಾಗಿ ನೀಡಿದರು.

ಸರ್ಕಾರಿ ಶಾಲೆಗಳಲ್ಲಿ ಬಹುತೇಕ ಬಡ ಹಾಗೂ ಮದ್ಯಮ ವರ್ಗದ ಕುಟುಂಬದ ಮಕ್ಕಳು ವ್ಯಾಸಾಂಗ ಮಾಡುತ್ತಿದ್ದು ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕರಿಸಿದ ಹಿರಿಯ ವಿದ್ಯಾರ್ಥಿಗಳಾದ ಸಾತ್ವಿಕ್ ಬಿ. ಎ. ಹಾಗೂ ರಾಕೇಶ್ ವಿ.ಕೆ. ಅವರುಗಳ ಪೋಷಕರಾದ ಬಾಳಿಗೆಮನೆ ಅನಂತಮೂರ್ತಿ ರವರನ್ನು ಶಾಲಾ ವತಿಯಿಂದ ಶಾಲು ಹೊದಿಸಿ ಗೌರವಿಸಿ ಅಭಿನಂದಿಸಿದರು.

Senior Government Primary School ಈ ಸಂದರ್ಭದಲ್ಲಿ ಶಾಲೆಗೆ ಕೊಡುಗೆ ನೀಡಿದ ಅವರನ್ನು ಹೊದಲ ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಅದ್ಯಕ್ಷರು ಮತ್ತು ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಕೃತಜ್ಞತೆ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...