Municipal corporation ಶಿವಮೊಗ್ಗ ನಗರದ ಪ್ರತಿಷ್ಠಿತ ಬಡಾವಣೆಗಳಲ್ಲೊಂದಾದ ಜೆ.ಹೆಚ್. ಬಡಾವಣೆ (೧ನೇ ವಾರ್ಡ್) ಯ ರವಿಶಂಕ ವಿದ್ಯಾ ಸಂಸ್ಥೆ ಮತ್ತು ಇಲ್ಲಿನ ಬಸ್ ಸ್ಟ್ಯಾಂಡ್ ಸುತ್ತ ಮುತ್ತ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಮಹಾ ನಗರ ಪಾಲಿಕೆ ಮತ್ತು ಸಂಬಂಧಪಟ್ಟ ಇಲಾಖೆಯವರು ಕೂಡಲೆ ರಸ್ತೆ ದುರಸ್ಥಿ ಮಾಡಿಸುವಂತೆ ಜೆ.ಹೆಚ್. ಪಟೇಲ್ ಬಡಾವಣೆಯ ಹಾಗೂ ಸಹಕಾರಿ ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಮನವಿ ಮಾಡಿದ್ದಾರೆ.
ಈ ಭಾಗದಲ್ಲಿ ಶಾಲಾ ವಾಹನಗಳು, ಕೆಲಸ ಕಾರ್ಯಗಳಿಗೆ ತೆರಳುವ ಸಾರ್ವಜನಿಕರು, ಕೂಲಿ ಕಾರ್ಮಿಕರು ಜೊತೆಗೆ ಶಾಲಾ ಮಕ್ಕಳು, ವಯಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಾರೆ. ಇಲ್ಲಿ ದೇವಸ್ಥಾನಗಳೂ ಕುಡ ಇವೆ. ಕಳೆದ ಬಾರಿಯ ಮಳೆಗಾಲದಲ್ಲಿ ಇಲ್ಲಿ ರಸ್ತೆಯಲ್ಲಿ ಗುಂಡಿಗಳು ಹೆಚ್ಚಾಗಿ ಓಡಾಡುವುದೇ ದುಸ್ಥಿತಿಯಾಗಿತ್ತು.
Municipal corporation ಆಗ ರಸ್ತೆಗಳನ್ನು ಸರಿಪಡಿಸುವಂತೆ ಸ್ಥಳೀಯ ಪಾಲಿಕೆ ಸದಸ್ಯರಿಗೆ ತಿಳಿಸಲಾಗಿತ್ತಾದರೂ ಏನೂ ಪ್ರಯೋಜನವಾಗಿಲ್ಲ.
ಇತ್ತೀಚೆಗೆ ಸುರಿದ ಮಳಿಗೆ ರಸ್ತೆಯಲ್ಲಿ ಗುಂಡಿಗಳು ಇನ್ನೂ ಹೆಚ್ಚಾಗಿ ಓಡಾಡುವುದೇ ಕಷ್ಟವಾಗಿದೆ. ಇದ ರಿಂದಾಗಿ ಬೈಕ್ ಸವಾರರು ಹಲವಾರು ಭಾರಿ ಬಿದ್ದಿರುವ ಉದಾಹರಣೆಗಳಿವೆ.
ಕೂಡಲೇ ಮಹಾನಗರ ಪಾಲಿಕೆ ಸದಸ್ಯರು, ಸಂಬಂಧಪಟ್ಟ ಇಲಾಖೆ ಯವರು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ದುರಸ್ಥಿ ಮಾಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಸಾರ್ವಜನಿ ಕರು ಸುರಕ್ಷಿತವಾಗಿ ಓಡಾಡಲು ಅನುವು ಮಾಡಿಕೊಡಬೇಕೆಂದು ಈ ಭಾಗದ ಜನರು ಮನವಿ ಮಾಡಿದ್ದಾರೆ.