Monday, February 2, 2026
Monday, February 2, 2026

K. J. George ಚಿಕ್ಕಮಗಳೂರು ಕೆಡಿಪಿ ಸಭೆಯಲ್ಲಿ ಶಾಸಕರ ಆಸನಗಳ ವ್ಯವಸ್ಥೆ ಬಗ್ಗೆ “ಗರಂ”ವಾಗ್ಯುದ್ಧ

Date:

K. J. George ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ‌ ಸಚಿವ ಕೆ.ಜೆ. ಜಾರ್ಜ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ನಡುವೆ ಖುರ್ಚಿ ಗಲಾಟೆ ನಡೆಯಿತು.

ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರನ್ನು ಸಮಾಧಾನ ಮಾಡಲು ಹೈರಾಣಾದರು.
ಉಸ್ತುವಾರಿ ಸಚಿವರು ಸಭೆಯಲ್ಲಿ ಆಸೀನರಾಗುತ್ತಿದ್ದಂತೆ ಶಾಸಕರು ವೇದಿಕೆ ಖುರ್ಚಿಯಲ್ಲಿ ಆಸೀನರಾದರು. ಈ ವೇಳೆ ಸಿ.ಟಿ.ರವಿ, ಹಾಗೂ ಭೋಜೇಗೌಡ ಈ ಹಿಂದಿನ ಎಲ್ಲಾ ಸಭೆಗಳಲ್ಲಿ ಶಾಸಕರು ಕೆಳಗಿನ ಆಸನಗಳಲ್ಲಿ ಕುಳಿತುಕೊಳ್ಳುವುದು ಸಂಪ್ರದಾಯ ಎಂದರು.

ಈ ವೇಳೆ ಕಡೂರು ಶಾಸಕ ಕೆ.ಎಸ್. ಆನಂದ್ ಶಾಸಕರ ಘನತೆ ಎತ್ತಿ ಹಿಡಿಯುವ ಉದ್ದೇಶದಿಂದ ಮೇಲೆ ಕುಳಿತುಕೊಳ್ಳಬೇಕು. ವಿಧಾನ ಪರಿಷತ್ ಸದಸ್ಯರ ಸ್ಥಾನ ಸಾಂವಿಧಾನಿಕ ಹುದ್ದೆಯೇ ಅಲ್ಲ ಎನ್ನುತ್ತಿದ್ದಂತೆ ಸಿ.ಟಿ.ರವಿ ಮತ್ತು ಭೋಜೇಗೌಡ ಆಕ್ರೋಶ ವ್ಯಕ್ತಪಡಿಸಿದರು. ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.

ವೇದಿಕೆ ಮೇಲೆ ಕೂರಬೇಕೆ ಅಥವಾ ಕೆಳಗೆ ಕೂರಬೇಕೆ ಎನ್ನುವ ವಿಚಾರ ಸಭೆಯ ಅಧ್ಯಕ್ಷರ ವಿವೇಚನೆಗೆ ಬಿಟ್ಟಿದ್ದು ಎಂದಿದೆ ಎಂದು ಸಿಇಓ ಸಭೆಗೆ ತಿಳಿಸಿದರು.

K. J. George ಮಧ್ಯ ಪ್ರವೇಶಿಸಿದ ಕೆ.ಜೆ.ಜಾರ್ಜ್ ಈ ಗೊಂದಲಕ್ಕೆ ಸ್ಪಷ್ಟನೆ ಪಡೆದು ಮುಂದಿನ ಸಭೆಯಲ್ಲಿ ಅನುಸರಿಸಲಾಗು ವುದು ಎಂದರು. ಈ ಸಿ.ಟಿ.ರವಿ ಮತ್ತು ಭೋಜೇಗೌಡ ವೇದಿಕೆ ಕೆಳಗಿನ ಖುರ್ಚಿಯಲ್ಲಿ ಕುಳಿತರು. ಗೊಂದಲದ ಸ್ಪಷ್ಟತೆ ಪಡೆದು ಮುಂದಿನ ಸಭೆಯಲ್ಲಿ ಅನುಸರಿಸೋಣ ಈಗ ವೇದಿಕೆಗೆ ಬನ್ನಿ ಎಂದು ಜಾರ್ಜ್ ಮತ್ತೇ ಮನವಿ ಮಾಡಿದರು.

ಇದಕ್ಕೆ ಸಿ.ಟಿ.ರವಿ ಮತ್ತು ಭೋಜೇಗೌಡ ಕೆಳಗಿನ ಆಸನದಲ್ಲೆ ಕುಳಿತು ಸಭೆಯಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...