Monday, February 2, 2026
Monday, February 2, 2026

G. Parameshwar ಹವಾಮಾನ ವೈಪರೀತ್ಯ ಶಿವಮೊಗ್ಗದ ಧರೆಗಿಳಿಯದೇ ಬೆಂಗಳೂರಿಗೆ ಗೃಹಸಚಿವರಿದ್ದ ವಿಮಾನ ವಾಪಸ್

Date:

G. Parameshwar ಹವಾಮಾನ ವೈಪರೀತ್ಯದಿಂದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಅವರು ಶಿವಮೊಗ್ಗಕ್ಕೆ ಬಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವಿಮಾನದ ಮೂಲಕ ಆಗಮಿಸಬೇಕಾಗಿತ್ತು. ಬೆಳಗ್ಗೆ ಬೆಂಗಳೂರಿನಿಂದ ಸುಮಾರು 11:30ಕ್ಕೆ ಹೊರಟು 12:30ಕ್ಕೆ ಶಿವಮೊಗ್ಗಕ್ಕೆ ಆಗಮಿಸಬೇಕಿತ್ತು. ಬೆಂಗಳೂರಿನಿಂದ ಹೊರಟ ಇಂಡಿಗೋ ವಿಮಾನ ಶಿವಮೊಗ್ಗಕ್ಕೆ ಬಂದಾಗ ಇಲ್ಲಿ ವಿಮಾನ ಲ್ಯಾಂಡ್ ಮಾಡಿಸಲು ಪೂರಕ ವಾತಾವರಣ ಇರದ ಕಾರಣಕ್ಕೆ ವಿಮಾನ ಬೆಂಗಳೂರಿಗೆ ವಾಪಸ್ ಆಗಿದೆ.
ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸಿ, ಸೊರಬದಲ್ಲಿ ಪೊಲೀಸ್ ವಸತಿ ಸಮುಚ್ಚಯ ಉದ್ಘಾಟನೆ ನಡೆಸಿ, ತೀರ್ಥಹಳ್ಳಿಗೆ ತೆರಳಬೇಕಿತ್ತು. ತೀರ್ಥಹಳ್ಳಿಯಲ್ಲಿ 20.50 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾದ ಕೋಣಂದೂರು ಪೊಲೀಸ್​ ವಸತಿ ಸಂಕೀರ್ಣ, ತೀರ್ಥಹಳ್ಳಿ ರಥಬೀದಿ ಪೊಲೀಸ್​ ಸ್ಟೇಷನ್, ಬೆಟ್ಟಮಕ್ಕಿಯಲ್ಲಿ ನೂತನವಾಗಿ ನಿರ್ಮಾಣ ಆಗಿರುವ ಫೈರ್ ಸ್ಟೇಷನ್ ಹಾಗೂ ಸೊಪ್ಪುಗುಡ್ಡೆಯಲ್ಲಿ 24 ಮನೆಗಳುಳ್ಳ ವಸತಿ ಸಮುಚ್ಚಯ ಕೂಡ ಉದ್ಘಾಟನೆ ಮಾಡಬೇಕಿತ್ತು. ಇಂದು ಗೃಹ ಸಚಿವರು ಬಾರದ ಕಾರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟನೆ ಮಾಡಲಿದ್ದಾರೆ.
G. Parameshwar ಈ ಕುರಿತು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಗೃಹ ಸಚಿವರು ಇಂದು ಸೊರಬಕ್ಕೆ ಬರಬೇಕಿತ್ತು. ಆದರೆ, ಹವಾಮಾನ ವೈಪರೀತ್ಯದಿಂದ ವಿಮಾನ ಲ್ಯಾಂಡ್ ಆಗದೆ ವಾಪಸ್ ಆಗಿದ್ದಾರೆ. ಗೃಹ ಸಚಿವರ ಗೈರಿನಲ್ಲಿ ನಾನು ಉದ್ಘಾಟನೆ ಮಾಡಲಿದ್ದೇನೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...