Monday, February 2, 2026
Monday, February 2, 2026

Agumbe Ghat ಆಗುಂಬೆ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ. ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಸೂಚಿ

Date:

Agumbe Ghat ಮಳೆ ಹಿನ್ನೆಲೆಯಲ್ಲಿ ಭಾರೀ ವಾಹನ್ಳಿಗೆ ಗಳಿಗೆ ಆಗುಂಬೆ ಘಾಟಿಯಲ್ಲಿ ನಿರ್ಬಂಧ ಹೇರಲಾಗಿದೆ. ಈ‌ಮಧ್ಯೆ ಘಾಟಿಯಲ್ಲಿ ಕಳೆದ ರಾತ್ರಿ ಗುಡ್ಡ ಕುಸಿದಿದೆ.

ಸ್ವಲ್ಪ ಪ್ರಮಾಣದಲ್ಲಿ ಈಗ ಕುಸಿದಿದ್ದರೂ ಮಳೆ ಹೆಚ್ಚಿರುವ ಕಾರಣ ಆತಂಕ ಉಂಟಾಗಿದೆ.
ಘಾಟಿ ತಿರುವುಗಳಲ್ಲಿ ಧರೆಯಿಂದ ಇಳಿಯುವ ನೀರು, ಮಣ್ಣನ್ನು ಸಡಿಲಗೊಳಿಸುತ್ತಲೇ ಇರುತ್ತವೆ. ಇನ್ನೂ ರಸ್ತೆ ಮೇಲಿನ ನೀರು ಧರೆಕೊರೆಯುತ್ತಾ ಹರಿಯುತ್ತವೆ. ಇದರ ಪರಿಣಾಮವೋ ಏನೋ ಎಂಬಂತೆ ಇವತ್ತು ಐದು ಮತ್ತು ಆರನೇ ಕ್ರಾಸ್‌ನಲ್ಲಿ ಬೆಟ್ಟದಲ್ಲಿ ರಸ್ತೆ ಪಕ್ಕದ ಧರೆ ತುಸು ಪ್ರಮಾಣದಲ್ಲಿ ಕುಸಿದಿದೆ.

Agumbe Ghat ಕುಸಿದ ಮಣ್ಣು ರಸ್ತೆ ಮೇಲೆ ಬಿದ್ದಿದ್ದು, ಅರ್ಧರಸ್ತೆಯ ತುಂಬಾ ಹರಡಿದೆ. .
ಸ್ಥಳೀಯರು ಹೇಳುವ ಪ್ರಕಾರ, ಇನ್ನೊಂದಿಷ್ಟು ದಿನ ಹೀಗೆ ಧರೆಕುಸಿಯುವ ಆತಂಕವಿದೆ. ಈ ಹಿಂದೆ ದೊಡ್ಡ ಪ್ರಮಾಣದಲ್ಲಿ ಘಾಟಿಯಲ್ಲಿ ಗುಡ್ಡ ಕುಸಿದಿತ್ತು. ಆ ಥರದ ಘಟನೆಗಳು ಮತ್ತೆ ಸಂಭವಿಸದೇ ಇರಲಿ ಎನ್ನುತ್ತಾರೆ.

ಭಾರಿ ತೀರ್ಥಹಳ್ಳಿ – ಉಡುಪಿ ಮಾರ್ಗವಾಗಿ ಹೋಗುವ ವಾಹನಗಳು ಹುಲಿಕಲ್ ಘಾಟಿ ಮಾರ್ಗವಾಗಿ ಹೋಗುತ್ತಿವೆ. ಈಗ ಆಗುಂಬೆ ಘಾಟಿಯ 5 ನೇ ತಿರುವಿನಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿಯಲು ಆರಂಭವಾಗಿದ್ದು ವಾಹನ ಸವಾರರು ಎಚ್ಚರಿಕೆವಹಿಸಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...