Saturday, December 6, 2025
Saturday, December 6, 2025

Arjun Guruji ಜುಲೈ 16 ರಂದು ಶಿವಮೊಗ್ಗದಲ್ಲಿ ಅರ್ಜುನ್ ಗುರೂಜಿ ಅವರಿಗೆ “ಗುರುವಂದನೆ” ಕಾರ್ಯಕ್ರಮ

Date:

Arjun Guruji ಶಿವಮೊಗ್ಗ ನಗರದ ಸೋಮಿನಕೊಪ್ಪ ರಸ್ತೆಯಲ್ಲಿರುವ ದೇವರಾಜ ಅರಸ ಬಡಾವಣೆಯಲ್ಲಿನ ಆರ್ಯವೈಶ್ಯ ಸಂಸ್ಕೃತಿ ಸದನದಲ್ಲಿ ಜುಲೈ 16ರಂದು ಸಂಜೆ 6ಕ್ಕೆ ಸಮನ್ವಯ ಟ್ರಸ್ಟ್ ವತಿಯಿಂದ ಆರ್‌ಜಿಎಸ್ ಕೇಟರಿಂಗ್, ಭಜನಾ ಪರಿಷತ್, ಭಜನಾ ಮಂಡಳಿಗಳ ಒಕ್ಕೂಟದ ಆಶ್ರಯದಲ್ಲಿ ಮೈಸೂರಿನ ಪೂಜ್ಯ ಶ್ರೀ ಅರ್ಜುನ ಅವಧೂತ ಮಹಾರಾಜರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನಾ ಕಾರ್ಯಕ್ರಮ ಹಾಗೂ ಲಲಿತ ಸಹಸ್ರ ನಾಮ ಪಾರಾಯಣ ಹಮ್ಮಿಕೊಳ್ಳಲಾಗಿದೆ. ಮೈಸೂರಿನ ಶ್ರೀ ಅರ್ಜುನ ಅವಧೂತ Arjun Guruji ಮಹಾರಾಜರು, ಹೊಸನಗರ ಮೂಲೆಗದ್ದೆ ಸದಾಶಿವ ಆಶ್ರಮದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ಹಾಗೂ ಸಿದ್ದಾಪುರದ ದೈವಜ್ಞ ಬ್ರಾಹ್ಮಣ ಮಹಾಸಭಾದ ಶ್ರೀ ಸಂತೋಷ್ ಭಟ್ ಗುರೂಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುವರು. ಭಜನಾ ಪರಿಷತ್ ಮುಖ್ಯಸ್ಥ ಶಬರೀಶ್ ಕಣ್ಣನ್, ಸಮನ್ವಯ ಟ್ರಸ್ಟ್ ನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಸಮನ್ವಯ ಟ್ರಸ್ಟ್ ಅಧ್ಯಕ್ಷೆ ಗಿರಿಜಾದೇವಿ ಅಧ್ಯಕ್ಷತೆ ವಹಿಸುವರು. ಗುರುವಂದನಾ ಕಾರ್ಯಕ್ರಮದ ನಂತರ ಪ್ರಸಾದ ವಿನಿಯೋಗ ಇರುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...