Friday, September 27, 2024
Friday, September 27, 2024

Department of Education ಎಲ್ ಕೆಜಿ , ಯುಕೆಜಿ ಮತ್ತು ಒಂದನೇ ತರಗತಿಗೆ ಮಕ್ಕಳ ಪ್ರವೇಶಾತಿಗೆ ಸರ್ಕಾರದಿಂದ ವಯೋಮಿತಿ ಫಿಕ್ಸ್

Date:

Department of Education ಎಲ್ ಕೆಜಿ, ಯುಕೆಜಿ ಮತ್ತು 1ನೇ ತರಗತಿ ಪ್ರವೇಶಾತಿಗೆ ಗರಿಷ್ಠ ವಯೋಮಿತಿ ಗೊಂದಲಕ್ಕೆ ಶಿಕ್ಷಣ ಇಲಾಖೆ ಅಧಿಕೃತ ತೆರೆ ಎಳೆದಿದೆ.
ಎಲ್ ಕೆಜಿ, ಯುಕೆಜಿ ಹಾಗೂ 1ನೇ ತರಗತಿ ಮಕ್ಕಳ ಪ್ರವೇಶಕ್ಕೆ ವಯೋಮಿತಿ ನಿಗದಿ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಎಲ್ ಕೆಜಿ ಪ್ರವೇಶಕ್ಕೆ ಗರಿಷ್ಠ ವಯೋಮಿತಿ 4-6 ವರ್ಷ, ಯುಕೆಜಿ ಪ್ರವೇಶಕ್ಕೆ 5 ರಿಂದ 7 ವರ್ಷ ನಿಗದಿ ಮಾಡಲಾಗಿದೆ.
ಸರ್ಕಾರದ ಆದೇಶದಲ್ಲಿ ಶಿಕ್ಷಣ ಹಕ್ಕು ಕಾಯ್ದೆ-2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರಂತೆ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗಧಿಪಡಿಸಲಾಗಿದೆ.

Department of Education 26.07.2022ರ ಆದೇಶದಲ್ಲಿ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗಧಿಪಡಿಸಲಾಗಿರುವುದನ್ನು 2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ತಿದ್ದುಪಡಿ ಮಾಡಿ ಆದೇಶಿಸಲಾಗಿದೆ.

ಹಾಗೆಯೇ 1ನೇ ತರಗತಿ ಪ್ರವೇಶಕ್ಕೆ ಗರಿಷ್ಠ ವಯೋಮಿತಿ 6-8 ವರ್ಷ ನಿಗದಿ ಪಡಿಸಲಾಗಿದೆ. ಹೀಗಾಗಿ ಇನ್ಮುಂದೆ 8 ವರ್ಷ ಮೀರಿದ್ರೆ 1ನೇ ತರಗತಿ ಪ್ರವೇಶವಿರುವುದಿಲ್ಲ . 8 ವರ್ಷ ಮೀರಿದರೂ ಶಾಲೆಗೆ ಸೇರದ ಮಕ್ಕಳನ್ನು ಶಾಲೆ ಬಿಟ್ಟ ಮಕ್ಕಳು ಎಂದು ಪರಿಗಣಿಸಲಾಗುತ್ತದೆ. ಅಲ್ಲದೇ ಅಂತಹ ಮಕ್ಕಳನ್ನು ಅವರ ವಯಸ್ಸಿಗೆ ತಕ್ಕಂತೆ ತರಗತಿಗಳ ಪ್ರವೇಶ ನೀಡಲಾಗುತ್ತದೆ. ಈ ಮೂಲಕ ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ಇದ್ದ ವಯೋಮಿತಿ ಗೊಂದಲ ನಿವಾರಣೆಯದಂತಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...