Thursday, March 19, 2026
Thursday, March 19, 2026

Department of Education ಎಲ್ ಕೆಜಿ , ಯುಕೆಜಿ ಮತ್ತು ಒಂದನೇ ತರಗತಿಗೆ ಮಕ್ಕಳ ಪ್ರವೇಶಾತಿಗೆ ಸರ್ಕಾರದಿಂದ ವಯೋಮಿತಿ ಫಿಕ್ಸ್

Date:

Department of Education ಎಲ್ ಕೆಜಿ, ಯುಕೆಜಿ ಮತ್ತು 1ನೇ ತರಗತಿ ಪ್ರವೇಶಾತಿಗೆ ಗರಿಷ್ಠ ವಯೋಮಿತಿ ಗೊಂದಲಕ್ಕೆ ಶಿಕ್ಷಣ ಇಲಾಖೆ ಅಧಿಕೃತ ತೆರೆ ಎಳೆದಿದೆ.
ಎಲ್ ಕೆಜಿ, ಯುಕೆಜಿ ಹಾಗೂ 1ನೇ ತರಗತಿ ಮಕ್ಕಳ ಪ್ರವೇಶಕ್ಕೆ ವಯೋಮಿತಿ ನಿಗದಿ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಎಲ್ ಕೆಜಿ ಪ್ರವೇಶಕ್ಕೆ ಗರಿಷ್ಠ ವಯೋಮಿತಿ 4-6 ವರ್ಷ, ಯುಕೆಜಿ ಪ್ರವೇಶಕ್ಕೆ 5 ರಿಂದ 7 ವರ್ಷ ನಿಗದಿ ಮಾಡಲಾಗಿದೆ.
ಸರ್ಕಾರದ ಆದೇಶದಲ್ಲಿ ಶಿಕ್ಷಣ ಹಕ್ಕು ಕಾಯ್ದೆ-2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರಂತೆ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗಧಿಪಡಿಸಲಾಗಿದೆ.

Department of Education 26.07.2022ರ ಆದೇಶದಲ್ಲಿ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗಧಿಪಡಿಸಲಾಗಿರುವುದನ್ನು 2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ತಿದ್ದುಪಡಿ ಮಾಡಿ ಆದೇಶಿಸಲಾಗಿದೆ.

ಹಾಗೆಯೇ 1ನೇ ತರಗತಿ ಪ್ರವೇಶಕ್ಕೆ ಗರಿಷ್ಠ ವಯೋಮಿತಿ 6-8 ವರ್ಷ ನಿಗದಿ ಪಡಿಸಲಾಗಿದೆ. ಹೀಗಾಗಿ ಇನ್ಮುಂದೆ 8 ವರ್ಷ ಮೀರಿದ್ರೆ 1ನೇ ತರಗತಿ ಪ್ರವೇಶವಿರುವುದಿಲ್ಲ . 8 ವರ್ಷ ಮೀರಿದರೂ ಶಾಲೆಗೆ ಸೇರದ ಮಕ್ಕಳನ್ನು ಶಾಲೆ ಬಿಟ್ಟ ಮಕ್ಕಳು ಎಂದು ಪರಿಗಣಿಸಲಾಗುತ್ತದೆ. ಅಲ್ಲದೇ ಅಂತಹ ಮಕ್ಕಳನ್ನು ಅವರ ವಯಸ್ಸಿಗೆ ತಕ್ಕಂತೆ ತರಗತಿಗಳ ಪ್ರವೇಶ ನೀಡಲಾಗುತ್ತದೆ. ಈ ಮೂಲಕ ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ಇದ್ದ ವಯೋಮಿತಿ ಗೊಂದಲ ನಿವಾರಣೆಯದಂತಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...