Thursday, March 19, 2026
Thursday, March 19, 2026

Anshuman Gaikwad ಮಾಜಿ ಕ್ರಿಕೆಟ್ ಸ್ಟಾರ್ ಅಂಶುಮನ್ ಗಾಯಕ್ವಾಡ್ ಚಿಕಿತ್ಸೆಗೆ ₹1 ಕೋಟಿ ನೆರವು

Date:

Anshuman Gaikwad ರಕ್ತದ ಕ್ಯಾನ್ಸರ್‌ನಿಂದ ಲಂಡನ್‌ ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಾರತದ ಮಾಜಿ ಕೋಚ್ ಅಂಶುಮಾನ್ ಗಾಯಕ್ವಾಡ್ ಅವರ ಚಿಕಿತ್ಸೆಗಾಗಿ 1 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಬಿಸಿಸಿಐ ನಿರ್ಧರಿಸಿದೆ.

ಗಾಯಕ್ವಾಡ್ ಅವರಿಗೆ ನೆರವಾಗುವಂತೆ ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಹಾಗೂ ಸಂದೀಪ್ ಪಾಟೀಲ್ ಮನವಿ ಮಾಡಿದ ಬೆನ್ನಲ್ಲೇ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದೆ.

“ಕ್ಯಾನ್ಸರ್‌ನಿಂದ ಬಳಲುತ್ತಿರುವ ಭಾರತದ ಹಿರಿಯ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಅವರಿಗೆ ಆರ್ಥಿಕ ನೆರವು ನೀಡಲು ತಕ್ಷಣವೇ 1 ಕೋಟಿ ರೂ. ಬಿಡುಗಡೆ ಮಾಡುವಂತೆ ಜಯ್ ಶಾ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಸೂಚನೆ ನೀಡಿದ್ದಾರೆ” ಎಂದು ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಹೇಳಿಕೆಯಲ್ಲಿ ತಿಳಿಸಿದೆ.

Anshuman Gaikwad ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಸಂಕಷ್ಟಕ್ಕೆ ಸ್ಪಂದಿಸಲು BCCI ಗೆ ಕಪಿಲ್ ದೇವ್ ಮನವಿ; ಪಿಂಚಣಿ ದೇಣಿಗೆ ನೀಡುವುದಾಗಿ ಪತ್ರ!
ಭಾರತದ ಮಾಜಿ ನಾಯಕ ಡಿ ಕೆ ಗಾಯಕ್ವಾಡ್ ಅವರ ಪುತ್ರ ಗಾಯಕ್ವಾಡ್ ಅವರು ಲಂಡನ್‌ನ ಕಿಂಗ್ಸ್ ಕಾಲೇಜು ಆಸ್ಪತ್ರೆಯಲ್ಲಿ ರಕ್ತದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ನೆರವು ನೀಡಲು ಗಾಯಕ್ವಾಡ್ ಅವರ ಕುಟುಂಬದೊಂದಿಗೆ ಜಯ್ ಶಾ ಮಾತನಾಡಿದ್ದಾರೆ. ಈ ಬಿಕ್ಕಟ್ಟಿನ ಸಮಯದಲ್ಲಿ ಮಂಡಳಿಯು ಗಾಯಕ್ವಾಡ್ ಅವರ ಕುಟುಂಬದ ಬೆಂಬಲಕ್ಕೆ ನಿಂತಿದೆ ಮತ್ತು ಗಾಯಕ್ವಾಡ್ ಅವರ ತ್ವರಿತ ಚೇತರಿಕೆಗೆ ಅಗತ್ಯವಾದ ಎಲ್ಲ ನೆರವನ್ನು ಮಾಡುತ್ತದೆ ಎಂದು ಬಿಸಿಸಿಐ ಹೇಳಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...