Monday, May 4, 2026
Monday, May 4, 2026

Kadamba Kannada Vedike ಬೊಮ್ಮನಕಟ್ಟೆ ಆಶ್ರಯ ಬಡಾವಣೆ ಬಿ ಬ್ಲಾಕ್ ಮೂಲ ಸೌಕರ್ಯ ವಂಚಿತ ಸರಿಪಡಿಸಲು ಮನವಿ

Date:

Kadamba Kannada Vedike ಮಹಾನಗರ ಪಾಲಿಕೆ ವ್ಯಾಪ್ತಿಯ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬಿ ಬ್ಲಾಕ್‌ನಲ್ಲಿ ಮೂಲ ಸೌಕರ್ಯ ಕಲ್ಪಿಸುವುದು ಸೇರಿದಂತೆ ಹಲವೆಡೆಯ ಮುಖ್ಯ ಸಮಸ್ಯ್ಸೆಗಳ ಈಡೇರಿಕೆಗೆ ಆಗ್ರಹಿಸಿ ಕದಂಬ ಕನ್ನಡ ವೇದಿಕೆ ಪ್ರತಿಭಟಿಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಕದಂಬ ವೇದಿಕೆ ಮುಖಂಡರು, ಶಿವಮೊಗ್ಗ ನಗರ ಅಭಿವೃದ್ಧಿ ಹೊಂದಿದ ನಗರವೆಂದು ಘೋಷಿಸಿರುವುದು ಹಾಸ್ಯಾಸ್ಪದವಾಗಿದೆ. ಸ್ಮಾರ್ಟ್ ಸಿಟಿ, ಅಮೃತ್ ಯೋಜನೆ, ನಗರೋತ್ಪನ್ನ-,೯ ಹಣಕಾಸು ಯೋಜನೆ ಸೇರಿದಂತೆ ನಾನಾ ಕಡೆಯಿಂದ ಹಣ ಬಂದರೂ ಜನಪ್ರತಿನಿಧಿಗಳು ಬೇಜಾವಾಬ್ದಾರಿತನ ಮಾಡುತ್ತಿದ್ದಾರೆ ಎಂದರು.

ಅಧಿಕಾರಿಗಳ ತಾತ್ಸಾರದಿಂದ ವಾರ್ಡ್ ನಂಬರ್-1ರ ಬೊಮ್ಮನಕಟ್ಟೆ “ಬಿ” ಬ್ಲಾಕ್ ಮೈಲಮ್ಮ ದೇವಸ್ಥಾನದ ಎದುರು ರಸ್ತೆಗಳು, ತಿರುವುಗಳು ಇಂದಿಗೂ ಡ್ರೈನೇಜ್, ರಸ್ತೆಗಳಿಲ್ಲ. ಈ ಪ್ರದೇಶದಲ್ಲಿ ಮಾತ್ರವಲ್ಲ ನಗರದ ಅನೇಕ ಕಡೆ ಇದೇ ಪರಿಸ್ಥಿತಿ ಆಗಿರುವುದು ಪಾಲಿಕೆಯ ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದರು.

Kadamba Kannada Vedike ಮೂಲ ಸೌಲಭ್ಯವಿಲ್ಲದೆ ಇಲ್ಲಿನ ನಾಗರೀಕರು, ವೃದ್ಧರು, ಶಾಲಾ ಮಕ್ಕಳಿಗೆ ಅನಾನುಕೂಲವಾಗಿದೆ. ವಾಸಿಗಳು ವಿಪರೀತ ಸೊಳ್ಳೆ ಕಾಟಗಳಿಂದ ಕಂಗಾಲಾಗಿ ಹೋಗಿದ್ದಾರೆ. ಆದ್ದರಿಂದ ಡೆಂಗ್ಯು ಜ್ವರಕ್ಕೆ ತುತ್ತಾಗುವ ಮುನ್ನ ನೂತನ ಪಾಲಿಕೆ ಆಯುಕ್ತರು ಪರಿಶೀಲಿಸಿ ಸೂಕ್ತ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಕನ್ನಡ ಕದಂಬ ವೇದಿಕೆ ರಾಜ್ಯ ಅಧ್ಯಕ್ಷ ವಿಶ್ವನಾಥ್ ಪಾಲಿಕೆಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ವೇದಿಕೆಯ ಪ್ರಮುಖರು, ಬೊಮ್ಮನಕಟ್ಟೆ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...