Saturday, July 11, 2026
Saturday, July 11, 2026

Institute of Management Studies ಕೃತಕ ಬುದ್ಧಿಮತ್ತೆ ಎಷ್ಟೇ ಪ್ರಬಲವಿರಲಿ ಸಾಂಪ್ರದಾಯಿಕ ಕೌಶಲಕ್ಕೆ ಸಾಟಿಯಿಲ್ಲ- ಡಾ. ಶಶಿಧರ್

Date:

Institute of Management Studies ಕೃತಕ ಬುದ್ಧಿಮತ್ತೆಯು ನಮ್ಮ ಹಾದಿಯಲ್ಲಿ ಎಷ್ಟೇ ಪ್ರಬಲವಾಗಿ ಬಂದರೂ ನಮ್ಮ ಸಾಂಪ್ರದಾಯಿಕ ಕೌಶಲ್ಯಗಳಿಗೆ ಅವು ಸಾಟಿಯಲ್ಲ, ಸಾಮಾಜಿಕ ಸಂಪರ್ಕ ಹಾಗೂ ನಿರಂತರ ಅಧ್ಯಯನದಿಂದ ಸಾಂಪ್ರದಾಯಿಕ ಕೌಶಲ್ಯ ಬರುತ್ತದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಡೀನ್ ಹಾಗೂ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಅಧ್ಯಕ್ಷ ಡಾ. ಶಶಿಧರ್ ಆರ್ ಹೇಳಿದರು.

ಅವರಿಂದು ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಶನ್ ನ ವಾಣಿಜ್ಯ ವಿಭಾಗದ ವತಿಯಿಂದ ಅಂತಿಮ ಬಿಕಾಂ ವಿದ್ಯಾರ್ಥಿಗಳಿಗೆ ವಿದಾಯ ಹೇಳುವ ‘ಬೀ ಐ ಹ್ಯಾವ್ 2024’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ತೊಂದರೆ ತೆಗೆದುಕೊಳ್ಳದೆ ಸಾಧನೆ ಸಾಧ್ಯವಿಲ್ಲ, ಜೇನುಹುಳುಗಳ ನಿರಂತರ ಕ್ರಿಯಾಶೀಲತೆ ಹಾಗೂ ತಾಳ್ಮೆ ಇದಕ್ಕೆ ಸಂಕೇತವಾಗಿದೆ, ಎಷ್ಟು ಚಟುವಟಿಕೆಯಿಂದ ಇರುತ್ತೇವೋ ಅಷ್ಟು ಸಮೃದ್ಧಿಯೂ ಜೀವನದಲ್ಲಿ ಸಾಧ್ಯ ಎಂದರು. ಸೆಮಿಕಂಡಕ್ಟರ್ ಮುಂತಾದ ಕ್ಷೇತ್ರಗಳಲ್ಲಿ ಭಾರತದ ಸಾಧನೆ ವಿಶ್ವವನ್ನೇ ಬೆರಗುಗೊಳಿಸುತ್ತಿದ್ದು 2030ರ ವೇಳೆಗೆ ಭಾರತವು 10 ಟ್ರಿಲಿಯನ್ ಡಾಲರ್ ಗಳ ವಿಶ್ವದ ಎರಡನೇ ದೊಡ್ಡ ಆರ್ಥಿಕ ಶಕ್ತಿಯಾಗಲಿದೆ, ವಾಣಿಜ್ಯ ಪದವೀಧರರಿಗೆ ಅವಕಾಶಗಳು ವಿಫುಲವಾಗಿವೆ, ಪೈಪೋಟಿ ದಟ್ಟಣೆಯ ವಿಶ್ವದಲ್ಲಿ ಸಾಮಾಜಿಕ ಸಂಪರ್ಕವೇ ಪರಿಹಾರವಾಗಬಲ್ಲದು ಎಂದರು.

Institute of Management Studies ಅಧ್ಯಕ್ಷ ಸ್ಥಾನದಿಂದ ಮಾತಾಡಿದ ಕಾಲೇಜಿನ ನಿರ್ದೇಶಕ ಡಾ. ಸ್ವಾಮಿ ತ್ರಿಭುವನಾನಂದ ಹೆಚ್ ವಿ ಅತ್ಯುತ್ತಮ ಗುಣಮಟ್ಟದ ಬಿಕಾಂ ಶಿಕ್ಷಣವನ್ನು ಕೊಡಬೇಕೆಂಬ ಸದುದ್ದೇಶದಿಂದ ಕಾಲೇಜಲ್ಲಿ ವಾಣಿಜ್ಯ ವಿಭಾಗವನ್ನು ಆರಂಭಿಸಲಾಯಿತು, ಇದಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯದ ಪ್ರೋತ್ಸಾಹವೂ ಸ್ಮರಣೀಯವಾಗಿದೆ ಎಂದರಲ್ಲದೆ ಜೀವನ ಕಟ್ಟಿಕೊಳ್ಳಲು ಕಾಲೇಜು ಶಿಕ್ಷಣ ಶಿಕ್ಷಣ ಮುಖ್ಯವಲ್ಲ ಎಂಬ ಕಾಲ ಹೋಯಿತು, ಶಿಕ್ಷಣವೂ ಮುಖ್ಯವಾಗಿದೆ, ಶಿಕ್ಷಣದಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಸಾಮರಸ್ಯ ಅವಶ್ಯ ಎಂದರು. ಅಧ್ಯಾಪಕ ಜ್ಞಾನೇಶ್ವರ ಮುಂತಾದವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕ್ರೀಡಾ ಮತ್ತು ಶೈಕ್ಷಣಿಕ ಸಾಧಕರಿಗೆ ಬಹುಮಾನ ಮತ್ತು ಟ್ರೋಫಿಗಳನ್ನು ವಿತರಿಸಲಾಯಿತು.

ಅದಿಲ್ ಮತ್ತು ಅಲ್ಫೀಸಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಸ್ಪೂರ್ತಿ ಮತ್ತು ಪ್ರಜ್ಞಾ ಪ್ರಾರ್ಥನೆಯನ್ನು ಹಾಡಿದರೆ ನಿತ್ಯಶ್ರೀ ಸ್ವಾಗತ ಕೋರಿದರು,ಪ್ರೊ.ಶ್ವೇತಾ ಬಿ ವಿ ವಾರ್ಷಿಕ ವರದಿ ವಾಚಿಸಿದರು. ಮುಖ್ಯ ಅತಿಥಿಗಳ ಪರಿಚಯವನ್ನು ಅಖಿಲ್ ಮಾಡಿದರೆ ಮಮತಾ, ಮೆಹ್ತಾ ವಂದನೆಗಳನ್ನು ಸಮರ್ಪಿಸಿದರು.

-ಚಿತ್ರ ಹಾಗೂ ವರದಿ: ಡಾ. ಎಚ್ ಬಿ ಮಂಜುನಾಥ-

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...