Tuesday, April 22, 2025
Tuesday, April 22, 2025

Imran Khan ಪಾಕ್ ಮಾಜಿ ಪ್ರಧಾನಿ ಇಮ್ರಾನ್ ರಾಜಕೀಯ ಪಕ್ಷಕ್ಕೆ ನಡುವೆ ನಿಷೇಧ ಘೋಷಣೆ

Date:

Imran Khan ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಕ್ಷವನ್ನು ನಿಷೇಧಿಸುವುದಾಗಿ ಪಾಕಿಸ್ತಾನ ಸರ್ಕಾರ ಸೋಮವಾರ ಘೋಷಿಸಿದೆ.

“ವಿದೇಶಿ ಧನಸಹಾಯ ಪ್ರಕರಣ, ಮೇ 9 ರ ಗಲಭೆ ಮತ್ತು ದೇಶದ ಗೌಪ್ಯತೆ ಸೋರಿಕೆ (ಸೈಫರ್) ಹಾಗೂ ಯುಎಸ್‌ನಲ್ಲಿ ಅಂಗೀಕರಿಸಿದ ನಿರ್ಣಯಗಳು ಖಾನ್ ಅವರ ಪಕ್ಷವಾದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ)ಯನ್ನು ನಿಷೇಧಿಸಲು ಪ್ರಮುಖ ಆಧಾರಗಳಾಗಿವೆ” ಎಂದು ಪಾಕಿಸ್ತಾನದ ವಾರ್ತಾ ಸಚಿವ ಅತ್ತಾವುಲ್ಲಾ ತರಾರ್ ಪತ್ರಿಕಾಗೋಷ್ಠಿಯಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

71 ವರ್ಷ ವಯಸ್ಸಿನ ಇಮ್ರಾನ್ ಖಾನ್, 2022ರ ಏಪ್ರಿಲ್‌ನಲ್ಲಿ ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಂಡಾಗಿನಿಂದ ಅನೇಕ ಪ್ರಕರಣಗಳ ಹಿನ್ನೆಲೆಯಲ್ಲಿ ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ಇದ್ದಾರೆ.

ಪಿಟಿಐ ಪಕ್ಷದ ಸಮರ ಸಾರಿರುವ ಫೆಡರಲ್ ಸರ್ಕಾರ, ಮಾಜಿ ಆಡಳಿತ ಪಕ್ಷವನ್ನು ನಿಷೇಧಿಸಲು ನಿರ್ಧರಿಸಿದೆ. ಪಿಟಿಐ ಸಂಸ್ಥಾಪಕ ಇಮ್ರಾನ್ ಖಾನ್ ಮತ್ತು ಪಾಕಿಸ್ತಾನದ ಮಾಜಿ ಅಧ್ಯಕ್ಷ ಆರಿಫ್ ಅಲ್ವಿ ವಿರುದ್ಧ ದೇಶದ್ರೋಹದ 6 ನೇ ವಿಧಿಯ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲು ನಿರ್ಧರಿಸಿದೆ ಎಂದು ಜಿಯೋ ನ್ಯೂಸ್ ಹೇಳಿದೆ.

Imran Khan ಪಿಟಿಐ ಪಕ್ಷ ಅಸ್ತಿತ್ವದಲ್ಲಿದ್ದರೆ ದೇಶ ಅಭಿವೃದ್ದಿಯ ದಿಕ್ಕಿನಲ್ಲಿ ಮುನ್ನಡೆಯಲು ಸಾಧ್ಯವಿಲ್ಲ ಎಂದು ಸಚಿವ ಅತ್ತಾವುಲ್ಲಾ ತರಾರ್ ಹೇಳಿದ್ದಾರೆ.
“ನಮ್ಮ ತಾಳ್ಮೆ ಮತ್ತು ಸಹನೆಯನ್ನು ದೌರ್ಬಲ್ಯಗಳೆಂದು ಪರಿಗಣಿಸಲಾಗುತ್ತಿದೆ. ನಮ್ಮ ಸರ್ಕಾರ ರಾಜಕೀಯವಾಗಿ ಮತ್ತು ಆರ್ಥಿಕವಾಗಿ ದೇಶವನ್ನು ಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವುದರಿಂದ ಪಿಟಿಐ ಮತ್ತು ಪಾಕಿಸ್ತಾನ ಒಟ್ಟಿಗೆ ಮುನ್ನಡೆಯಲು ಸಾಧ್ಯವಿಲ್ಲ. ಪಿಟಿಐ ಪಕ್ಷವನ್ನು ನಿಷೇಧಿಸುವಂತೆ ಕೋರಿ ಫೆಡರಲ್ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....

Dr. Raj Kumar ಡಾ.ರಾಜ್ ಅಭಿನಯದ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ

Dr. Raj Kumar ವರನಟ ಡಾ ರಾಜ್ ಕುಮಾರ್ ರವರ ಜನ್ಮದಿನಾಚರಣೆ...

S.N.Chennabasappa ಜನಿವಾರ ತೆಗೆಸಿದ ಪ್ರಕರಣ, ಘಟನೆ‌ಮುಂದೆ ತಪ್ಪಿಸಲು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವಿಪ್ರ ಸಂಘಟನೆಯ ಮನವಿ

S.N.Chennabasappa ಶಿವಮೊಗ್ಗದ ದುರ್ಗಿಗುಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಜಿಲ್ಲಾಧಿಕಾರಿ...