Monday, April 21, 2025
Monday, April 21, 2025

B.Y. Vijayendra ಮೂಡಾಹಗರಣ ದಾಖಲೆಗೆ ಒತ್ತಾಯಿಸಿ ಬಿ.ವೈ. ವಿಜಯೇಂದ್ರ ನಿವಾಸಕ್ಕೆ ಕಾಂಗ್ರೆಸ್ ಘೇರಾವ್ ಯತ್ನ,ತಡೆದ ಪೊಲೀಸ್

Date:

B.Y. Vijayendra ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಕುಟುಂಬಕ್ಕೆ ಮುಡಾದಿಂದ 48 ಸೈಟ್‌ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆ ಕೊಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಿವಾಸಕ್ಕೆ ಕಾಂಗ್ರೆಸ್ ಮುಖಂಡರು ಭೇಟಿ ನೀಡಿದ್ದು, ಆದರೆ ರಸ್ತೆಯಲ್ಲೇ ತಡೆದ ಪೊಲೀಸರು ವಾಪಸ್ ಕಳಿಸಿದ್ದಾರೆ. 48 ಸೈಟ್‌ ಹಂಚಿಕೆ ಆರೋಪ್​ ಕೇಸ್​​ ಬಗ್ಗೆ ತನಿಖೆಗೆ ಕೋರಿ 2011ರಲ್ಲಿ ಸಭಾಪತಿಗೆ ಬಿಎಸ್​ ಯಡಿಯೂರಪ್ಪ ದಾಖಲೆ ಸಲ್ಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್ ಮುಖಂಡರು ಇದರ ಚರ್ಚೆಯನ್ನು ಮುಂದಿವರೆಸಲು ವಿಜಯೇಂದ್ರಗೆ ಆಗ್ರಹಿಸಿದ್ದರು. ಈ‌ ಹಿನ್ನೆಲೆಯಲ್ಲಿ ಈ ಆರೋಪಕ್ಕೆ ಸಂಬಂಧಿಸಿದ ದಾಖಲೆ ಕೊಡಲು ವಿಜಯೇಂದ್ರ ನಿವಾಸಕ್ಕೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಮತ್ತು ಯುವ ಕಾಂಗ್ರೆಸ್ ಮುಖಂಡ ಮನೋಹರ್​​ ಆಗಮಿಸಿದ್ದರು. ಆದರೆ ನಿವಾಸದ ಬಳಿ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ತಡೆದಿದ್ದಾರೆ.
ಬಿಜೆಪಿಗೆ ರಮೇಶ್​ ಬಾಬು ಪ್ರಶ್ನೆ
B.Y. Vijayendra ಸುದ್ದಿಗೋಷ್ಠಿ ಮಾಡಿದ್ದ ವಿಧಾನಪರಿಷತ್​ ಮಾಜಿ ಸದಸ್ಯ ಹಾಗೂ ಕೆಪಿಸಿಸಿ ವಕ್ತಾರ ರಮೇಶ್​ ಬಾಬು ಮುಡಾ ಸೈಟ್​ ಹಂಚಿಕೆಯಲ್ಲಿ, ಮಾಜಿ ಪ್ರಧಾನಿ ಹೆಚ್​ಡೆ ದೇವೆಗೌಡರು ತಮ್ಮ ಕುಟುಂಬ ಸದಸ್ಯರಿಗೆ 48 ನಿವೇಶನಗಳನ್ನು ಹಂಚಿಕೆ ಆರೋಪ ಮಾಡಿದ್ದು, ಬಿಜೆಪಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.
ಬಿಎಸ್​ ಯಡಿಯೂರಪ್ಪ 2011ರಲ್ಲಿ ಸಭಾಪತಿಗೆ ಸಲ್ಲಿಸದ ದಾಖಲೆಗಳ ಪ್ರಕಾರ ಹೆಚ್​ಡಿ ಕುಮಾರಸ್ವಾಮಿ ಅವರಿಗೆ 300\200 ಹಂಚಿಕೆ ಬಗ್ಗೆ ತಿಳಿಸಿದ್ದಾರೆ. ಇದನ್ನು ಪರಿಷತ್ತಿನ ಕಲಾಪದಲ್ಲಿ ಕೂಡ ಪ್ರಸ್ತಾಪಿಸಲಾಗಿದೆ. ಈ ಬಗ್ಗೆ ಬಿಜೆಪಿ ಅವರ ನಿಲುವೇನು ಎಂದು ಪ್ರಶ್ನಿಸಿದ್ದಾರೆ.
ಮುಡಾ ಹಗರಣದಲ್ಲಿ ಯಾರೆಲ್ಲಾ ಬಿಜೆಪಿ ನಾಯಕರು ಎಷ್ಟು ನಿವೇಶಗಳನ್ನು ಪಡೆದುಕೊಂಡಿದ್ದಾರೆ ಎಂದು ತಿಳಿಸಲಿ. ಏಕೆಂದರೆ ಬಿಜೆಪಿ ಅಧಿಕಾರಿದಲ್ಲಿ ಇದ್ದಾಗಲೇ ಮೈಸೂರಿನ ಮುಡಾದಲ್ಲಿ ಹೆಚ್ಚು ಹೆಚ್ಚು ಹಗರಣಗಳು ನಡೆದಿವೆ ಎಂದು ಆರೋಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...