Saturday, August 29, 2026
Saturday, August 29, 2026

B.Y. Vijayendra ಮೂಡಾಹಗರಣ ದಾಖಲೆಗೆ ಒತ್ತಾಯಿಸಿ ಬಿ.ವೈ. ವಿಜಯೇಂದ್ರ ನಿವಾಸಕ್ಕೆ ಕಾಂಗ್ರೆಸ್ ಘೇರಾವ್ ಯತ್ನ,ತಡೆದ ಪೊಲೀಸ್

Date:

B.Y. Vijayendra ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಕುಟುಂಬಕ್ಕೆ ಮುಡಾದಿಂದ 48 ಸೈಟ್‌ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆ ಕೊಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಿವಾಸಕ್ಕೆ ಕಾಂಗ್ರೆಸ್ ಮುಖಂಡರು ಭೇಟಿ ನೀಡಿದ್ದು, ಆದರೆ ರಸ್ತೆಯಲ್ಲೇ ತಡೆದ ಪೊಲೀಸರು ವಾಪಸ್ ಕಳಿಸಿದ್ದಾರೆ. 48 ಸೈಟ್‌ ಹಂಚಿಕೆ ಆರೋಪ್​ ಕೇಸ್​​ ಬಗ್ಗೆ ತನಿಖೆಗೆ ಕೋರಿ 2011ರಲ್ಲಿ ಸಭಾಪತಿಗೆ ಬಿಎಸ್​ ಯಡಿಯೂರಪ್ಪ ದಾಖಲೆ ಸಲ್ಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್ ಮುಖಂಡರು ಇದರ ಚರ್ಚೆಯನ್ನು ಮುಂದಿವರೆಸಲು ವಿಜಯೇಂದ್ರಗೆ ಆಗ್ರಹಿಸಿದ್ದರು. ಈ‌ ಹಿನ್ನೆಲೆಯಲ್ಲಿ ಈ ಆರೋಪಕ್ಕೆ ಸಂಬಂಧಿಸಿದ ದಾಖಲೆ ಕೊಡಲು ವಿಜಯೇಂದ್ರ ನಿವಾಸಕ್ಕೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಮತ್ತು ಯುವ ಕಾಂಗ್ರೆಸ್ ಮುಖಂಡ ಮನೋಹರ್​​ ಆಗಮಿಸಿದ್ದರು. ಆದರೆ ನಿವಾಸದ ಬಳಿ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ತಡೆದಿದ್ದಾರೆ.
ಬಿಜೆಪಿಗೆ ರಮೇಶ್​ ಬಾಬು ಪ್ರಶ್ನೆ
B.Y. Vijayendra ಸುದ್ದಿಗೋಷ್ಠಿ ಮಾಡಿದ್ದ ವಿಧಾನಪರಿಷತ್​ ಮಾಜಿ ಸದಸ್ಯ ಹಾಗೂ ಕೆಪಿಸಿಸಿ ವಕ್ತಾರ ರಮೇಶ್​ ಬಾಬು ಮುಡಾ ಸೈಟ್​ ಹಂಚಿಕೆಯಲ್ಲಿ, ಮಾಜಿ ಪ್ರಧಾನಿ ಹೆಚ್​ಡೆ ದೇವೆಗೌಡರು ತಮ್ಮ ಕುಟುಂಬ ಸದಸ್ಯರಿಗೆ 48 ನಿವೇಶನಗಳನ್ನು ಹಂಚಿಕೆ ಆರೋಪ ಮಾಡಿದ್ದು, ಬಿಜೆಪಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.
ಬಿಎಸ್​ ಯಡಿಯೂರಪ್ಪ 2011ರಲ್ಲಿ ಸಭಾಪತಿಗೆ ಸಲ್ಲಿಸದ ದಾಖಲೆಗಳ ಪ್ರಕಾರ ಹೆಚ್​ಡಿ ಕುಮಾರಸ್ವಾಮಿ ಅವರಿಗೆ 300\200 ಹಂಚಿಕೆ ಬಗ್ಗೆ ತಿಳಿಸಿದ್ದಾರೆ. ಇದನ್ನು ಪರಿಷತ್ತಿನ ಕಲಾಪದಲ್ಲಿ ಕೂಡ ಪ್ರಸ್ತಾಪಿಸಲಾಗಿದೆ. ಈ ಬಗ್ಗೆ ಬಿಜೆಪಿ ಅವರ ನಿಲುವೇನು ಎಂದು ಪ್ರಶ್ನಿಸಿದ್ದಾರೆ.
ಮುಡಾ ಹಗರಣದಲ್ಲಿ ಯಾರೆಲ್ಲಾ ಬಿಜೆಪಿ ನಾಯಕರು ಎಷ್ಟು ನಿವೇಶಗಳನ್ನು ಪಡೆದುಕೊಂಡಿದ್ದಾರೆ ಎಂದು ತಿಳಿಸಲಿ. ಏಕೆಂದರೆ ಬಿಜೆಪಿ ಅಧಿಕಾರಿದಲ್ಲಿ ಇದ್ದಾಗಲೇ ಮೈಸೂರಿನ ಮುಡಾದಲ್ಲಿ ಹೆಚ್ಚು ಹೆಚ್ಚು ಹಗರಣಗಳು ನಡೆದಿವೆ ಎಂದು ಆರೋಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕಾ.ತ.ಚಿಕ್ಕಣ್ಣನವರ ‘ಮನಸು ಮುಗಿಲು’

-ಡಾ. ರವಿ ಎಂ. ಸಿದ್ಲಿಪುರ Klive Special Article ಕನ್ನಡ ಸಣ್ಣಕಥಾ ಪರಂಪರೆಯಲ್ಲಿ...

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...