Tuesday, December 16, 2025
Tuesday, December 16, 2025

Shimoga Weather Forecast ತುಂಬಿದ ತುಂಗೆ. ತಗ್ಗಿನ ಪ್ರದೇಶದ ನಿವಾಸಿ ಜನಕ್ಕೆ ಮಹಾನಗರ ಪಾಲಿಕೆಯಿಂದ ಎಚ್ಚರಿಕೆ ಸಂದೇಶ

Date:

Shimoga Weather Forecast ಶಿವಮೊಗ್ಗ ನಗರದಲ್ಲಿ ಸೋಮವಾರ ರಾತ್ರಿಯಿಡಿ ಭಾರೀ ಮಳೆಯಾಯಿತು ಮಂಗಳವಾರ ಬೆಳಿಗ್ಗೆಯಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. ಮತ್ತೊಂದೆಡೆ, ನಗರದ ಮೂಲಕ ಹಾದು ಹೋಗಿರುವ ತುಂಗಾ ನದಿಯು ಮತ್ತೆ ಮೈದುಂಬಿದೆ. ಜೊತೆಗೆ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.
ಆಗುಂಬೆ , ತೀರ್ಥಹಳ್ಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ ಇದರಿಂದ ತುಂಗಾ ಡ್ಯಾಂಗೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ನಿರಂತರವಾಗಿ ಏರಿಕೆ ಕಂಡುಬರುತ್ತಿದೆ. ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ ಒಳಹರಿವಿನಷ್ಟೆ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಡ್ಯಾಂನಿಂದ ಹೊರಬಿಡುವ ನೀರಿನ ಪ್ರಮಾಣ ಹೆಚ್ಚಾದಂತೆ, ಶಿವಮೊಗ್ಗದಲ್ಲಿ ತುಂಗಾ ನದಿಯ ಹರಿವು ಕೂಡ ಹೆಚ್ಚಾಗುತ್ತದೆ. ಮಂಗಳವಾರ ಬೆಳಿಗ್ಗೆ ಅಪಾಯದ ಮಟ್ಟ ಸೂಚಿಸುವ ನಗರದ ಕೋರ್ಪಳಯ್ಯನ ಛತ್ರದ ಬಳಿ ನದಿಯಲ್ಲಿರುವ ಮಂಟಪ ಮುಳುಗಿತ್ತು. ಮಂಟಪದ ಮೇಲೆ ನೀರು ಹರಿಯುತ್ತಿದ್ದುದು ಕಂಡುಬಂದಿತು.

ಮತ್ತೊಂದೆಡೆ, ತುಂಗೆಯ ಹರಿವು ಹೆಚ್ಚಾಗಿರುವುದರಿಂದ ನದಿಯಂಚಿನ ತಗ್ಗು ಪ್ರದೇಶಗಳಲ್ಲಿ ಜಲಾವೃತದ ಭೀತಿ ಎದುರಾಗಿದೆ. ಈಗಾಗಲೇ ಪಾಲಿಕೆ ಆಡಳಿತವು ತಗ್ಗು ಪ್ರದೇಶಗಳ ಜನತೆಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ಹಾಗೆಯೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಆಡಳಿತ ಮಾಡಿಕೊಂಡಿದೆ.

Shimoga Weather Forecast ಮಳೆ ವಿವರ :
ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಅಕ್ಷರಶಃ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಮಾಣಿಯಲ್ಲಿ 240 ಮಿಲಿ ಮೀಟರ್ (ಮಿ.ಮೀ.), ಯಡೂರು 229 ಮಿ.ಮೀ., ಹುಲಿಕಲ್ಲು 245 ಮಿ.ಮೀ., ಮಾಸ್ತಿಕಟ್ಟೆ 247 ಮಿ.ಮೀ., ಸಾವೇಹಕ್ಲುವಿನಲ್ಲಿ 210 ಮಿ.ಮೀ. ಮಳೆಯಾಗಿದೆ.
ಶಿವಮೊಗ್ಗ 52 ಮಿ.ಮೀ., ಭದ್ರಾವತಿ (26. 40 ಮಿ.ಮೀ., ತೀರ್ಥಹಳ್ಳಿ 120. 90 ಮಿ.ಮೀ., ಸಾಗರ (129. 10 ಮಿ.ಮೀ., ಶಿಕಾರಿಪುರ 57. 90 ಮಿ.ಮೀ., ಸೊರಬ (58. 50 ಮಿ.ಮೀ. ಹಾಗೂ ಹೊಸನಗರದಲ್ಲಿ 133. 60 ಮಿ.ಮೀ. ಮಳೆಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...