Sunday, December 14, 2025
Sunday, December 14, 2025

Karnataka Working Journalists Association ಐದು ಸಾವಿರ ನಿವೇಶನ ವಿತರಿಸುವ ಗುರಿ ನನ್ನದು- ಸೂಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್

Date:

Karnataka Working Journalists Association ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಶಿವಮೊಗ್ಗ ಪ್ರೆಸ್ ಟ್ರಸ್ಟ್, ಜಿಲ್ಲಾಡಳಿತ ಮತ್ತು ಸೂಡಾ ಇವರ ಸಂಯುಕ್ತಾಶ್ರಯದಲ್ಲಿ ಸೋಮಿನಕೊಪ್ಪದ ನ್ಯಾಯಾಂಗ ಬಡಾವಣೆಯಲ್ಲಿ ಒಂದು ಸಾವಿರ ಸಸಿ ನಡುವ ಕಾರ್ಯಕ್ರಮಕ್ಕೆ ಸೂಡ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಚಾಲನೆ ನೀಡಿದರು.

ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪತ್ರಕರ್ತರಲ್ಲಿ ಎರಡು ವರ್ಗವಿದೆ ಒಂದು ನಕಾರಾತ್ಮಕ ಮತ್ತೊಂದು ಸಕರಾತ್ಮಕ ಸುದ್ದಿ ಮಾಡುವವರಿದ್ದಾರೆ.

ಇವರೆಲ್ಲರೂ ಸುದ್ದಿ ಮಾಡುವ ಮೂಲಕ ನೊಂದವರ ಪರವಿದ್ದಾರೆ. ನಾನು ಅಧ್ಯಕ್ಷನಾಗಿ ಬಂದ ನಂತರ ಐದು ಸಾವಿರ ನಿವೇಶನ ಮಾಡುವ ಗುರಿ ಹೊಂದಿದ್ದೇನೆ. ಆದರೆ ರೈತರಿಗೆ ಮಾರುಕಟ್ಟೆಯ ದರದಲ್ಲಿ ಪರಿಹಾರ ನೀಡಲಾಗುತ್ತಿಲ್ಲ. ಹಾಗಾಗಿ ನಿವೇಶನ ಮಾಡುವುದೇ ಕಷ್ಟವಾಗಿದೆ ಎಂದರು.

ಗೋಪಿಶೆಟ್ಟಿಕೊಪ್ಪದಲ್ಲಿ ಡಿನೋಟಿಫೈ ಮಾಡುವ ಹುನ್ಬಾರ ನಡೆದಿದೆ. ಅದನ್ನ ಸೂಡ ತಡೆಹಿಡಿದು ಸರ್ಕಾರಕ್ಕೆ ಡಿನೋಟಿ ಫೈ ಮಾಡದಂತೆ ಪತ್ರ ಬರೆಯಲಾಗಿದೆ.. ಸೂಡ ನಿವೇಶನ ಹಂಚಿಕೆಯಲ್ಲಿಯೇ ಪತ್ರಕರ್ತರಿಗೆ ಕಡಿಮೆ ಪರ್ಸೆಂಟೇಜ್ ನಲ್ಲಿ ಹಂಚಲಾಗುವುದು ಎಂದರು.

ಸೂಡಾ ಆಯುಕ್ತ ವಿಶ್ವನಾಥ್ ಮುದ್ದಜ್ಜಿ, ನ್ಯಾಯಾಂಗ ಇಲಾಖೆ ನೌಕರರ ಸಂಘದ ಅಧ್ಯಕ್ಷ ನರಸಿಂಹಮೂರ್ತಿ ಕಾರ್ಯದರ್ಶಿ ಪಾರ್ವತಮ್ಮ, ಶಿವಮೊಗ್ಗ ಟ್ರಸ್ಟ್ ಕಾರ್ಯದರ್ಶಿ ನಾಗರಾಜ್ ನೆರಿಗೆ, ಹಿರಿಯ ಪತ್ರಕರ್ತರಾದ ಗೋಪಾಲ ಯಡಗೆರೆ, ಶ್ರೀಕಾಂತ್ ಕಾಮತ್, ಮಾರ್ತಾಧಿಕಾರಿ ಮಾರುತಿ, ಸಂಘದ ಉಪಾಧ್ಯಕ್ಷರಾದ ವೈದ್ಯನಾಥ್, ಹಾಲಸ್ವಾಮಿ, ನಗರ ಕಾರ್ಯದರ್ಶಿ ಕೆ.ಆರ್.ಸೋಮನಾಥ್ ಉಪಸ್ಥಿತರಿದ್ದರು.

Karnataka Working Journalists Association ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ.ವಿ.ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಸಂಘದ ಜಿಲ್ಲಾ ಕಾರ್ಯದರ್ಶಿ ವಿ.ಟಿ.ಅರುಣ್ ಸ್ವಾಗತಿಸಿದರು. ಉಪಾಧ್ಯಕ್ಷ ದೀಪಕ್ ಸಾಗರ್ ನಿರೂಪಿಸಿದರು.

ವೇದಿಕೆ ಕಾರ್ಯಕ್ರಮದ ನಂತರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...