Sunday, May 17, 2026
Sunday, May 17, 2026

Hasanagara Panchayath ಹೊಸನಗರ ತಾಲ್ಲೂಕಿನ ಅರಗೋಡಿಯಲ್ಲಿ ಮಳೆಗೆ ಮನೆಯ ಮೇಲೆ ಬಿದ್ದ ತೆಂಗಿನ ಮರ

Date:

Hasanagara Panchayath ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಅರಗೋಡಿ ನಾಗರಾಜ್ ಎಂಬುವವರ ಮನೆ ಮೇಲೆ ಮಂಗಳವಾರ ಮಧ್ಯಾಹ್ನದ ಹೊತ್ತಿಗೆ ದೊಡ್ಡ ತೆಂಗಿನ ಮರವೊಂದು ಬಿದ್ದಿದೆ.
ಇಡೀ ಮರ ಮನೆಯ ಮೇಲೆಯೇ ಬಿದ್ದಿರುವುದರಿಂದ ಮನೆಯನ್ನ ಎರಡು ಭಾಗ ಮಾಡಿದಂತೆ ಹಾನಿಯಾಗಿದೆ. ಮನೆಯ ಹಂಚುಗಳು ಪೂರ್ಣ ಹಾಳಾಗಿದ್ದು, ಮಾಡು ಮರಿದುಬಿದ್ದಿದೆ ಗೋಡೆಗಳು ಜಖಂಗೊಂಡಿವೆ. ತೆಂಗಿನಮರ ಬುಡ ಸಮೇತವಾಗಿ ಬಿದ್ದಿದೆ.
ಕುಸಿದ ಛಾವಣಿ ಮನೆಯವರು ಬಚಾವ್ :
Hasanagara Panchayath ಇನ್ನೊಂದೆಡೆ ಹೊಸನಗರ ತಾಲ್ಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಹೊಟ್ಯಾಳಪುರದಲ್ಲಿ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ. ಅದೃಷ್ಟಕ್ಕೆ ಗೋಡೆ ಕುಸಿಯುವಾಗ ಶಬ್ದ ಬರುತ್ತಿದ್ದರಿಂದ ಮನೆಯವರೆಲ್ಲರೂ ಮನೆಯಿಂದ ಹೊರಕ್ಕೆ ಬಂದಿದ್ದಾರೆ. ಆನಂತರ ಮನೆಯ ಗೋಡೆ ಹಾಗೂ ಛಾವಣಿ ಕುಸಿದಿದೆ. ಹೊಟ್ಯಾಳಪುರ ಗ್ರಾಮದ ಪ್ರಭಾಕರ್ ಎಂಬುವವರ ಮನೆ ಇದಾಗಿದೆ. ಇದೀಗ ಮನೆ ಪೂರ್ಣ ಪ್ರಮಾಣದಲ್ಲಿ ಕುಸಿಯುವ ಹಂತದಲ್ಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...