Tuesday, October 1, 2024
Tuesday, October 1, 2024

Shivamogga Chitra Samaja ರಾಜ್ಯಮಟ್ಟದ “ಅಂಬೆಗಾಲು” ಕಿರುಚಿತ್ರ ಸ್ಪರ್ಧೆ ಪ್ರವೇಶಗಳಿಗೆ ಜುಲೈ 31 ವರೆಗೆ ಅವಧಿ ವಿಸ್ತರಣೆ

Date:

Shivamogga Chitra Samaja ಶಿವಮೊಗ್ಗ ನಗರದ ಸಿನಿಮೊಗೆ – ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ ಇದೀಗ ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ (ಶಾರ್ಟ್ ಫಿಲಂ) ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಜು. 31ರವರೆಗೆ ಅವಕಾಶವನ್ನು ವಿಸ್ತರಿಸಲಾಗಿದೆ ಎಂದು ಬೆಳ್ಳಿಮಂಡಲದ ಕಾರ್ಯಧ್ಯಕ್ಷರು ಹಾಗೂ ಅಂಬೆಗಾಲು ಕಿರುಚಿತ್ರ ಸ್ಪರ್ಧೆಯ ಸಂಚಾಲಕರೂ ಅದ ಡಿ. ಎಸ್. ಅರುಣ್ ತಿಳಿಸಿದರು.

ಈ ಸಂಬಂಧವಾಗಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದ ವಿವಿಧೆಡೆಗಳಿಂದ ದಿನಾಂಕ ವಿಸ್ತರಣೆಗೆ ಮನವಿ ಬಂದಿದ್ದು, ಕಿರುಚಿತ್ರ ನಿರ್ಮಾಪಕರು, ನಿರ್ದೇಶಕರ ಆಶಯದಂತೆ ಅರ್ಜಿ ಸಲ್ಲಿಕೆಯ ಅವಽಯನ್ನು ಜು. 31ರವರೆಗೆ ವಿಸ್ತರಿಸಲಾಗಿದ್ದು, ಸಿದ್ಧ ಪಡಿಸಿದ ಕಿರುಚಿತ್ರಗಳನ್ನು ಆ.30ರ ಒಳಗಾಗಿ ಸಲ್ಲಿಸುವಂತೆ ಮನವಿ ಮಾಡಿದರು.

ಯುವಜನತೆಯಲ್ಲಿ ಚಲನಚಿತ್ರ ಕುರಿತಾಗಿ ಅರಿವು ಮೂಡಿಸುವ ಹಾಗೂ ಅವರಲ್ಲಿನ ಸೃಜನಶೀಲತೆಯನ್ನು ಪ್ರೊತ್ಸಾಹಿಸುವ ದೃಷ್ಟಿಯಿಂದ ಈ ಕಿರುಚಿತ್ರ ಸ್ಪರ್ಧೆಯನ್ನು ಅಯೋಜಿಸಲಾಗಿದ್ದು, ಶೀರ್ಷಿಕೆ ಹಾಗೂ ಟೈಟಲ್ ಕಾರ್ಡ್ ಸೇರಿ 05 ರಿಂದ 07 ನಿಮಿಷಗಳ ಕಿರುಚಿತ್ರಗಳನ್ನು ಸ್ಪರ್ಧೆಗೆ ಕಳುಹಿಸಬಹುದು ಎಂದಿರುವ ಅವರು, ಮೊಬೈಲ್ ಸೇರಿದಂತೆ ಯಾವುದೇ ಕ್ಯಾಮರಾವನ್ನು ಬಳಸಿ ಚಿತ್ರೀಕರಿಸಬಹುದಾಗಿದ್ದು, ಸಾಮಾಜಿಕ ಜಾಲತಾಣಗಳೂ ಸೇರಿದಂತೆ ಯಾವುದೇ ಮಾಧ್ಯಮಗಳಿಗಿಂದ ದೃಶ್ಯಗಳನ್ನು ಕಟ್ ಅಂಡ್ ಪೇಸ್ಟ್ ಆಗಲೀ, ಸಾಕ್ಷ್ಯಚಿತ್ರವನ್ನಾಗಲಿ ಅಥವಾ ಸಂಪೂರ್ಣ ಎನಿಮೇಷನ್ ಚಿತ್ರಗಳನ್ನಾಗಲಿ ಸ್ಪರ್ಧೆಗೆ ಕಳಿಸುವಂತಿಲ್ಲ.
ಸಂಪೂರ್ಣವಾಗಿ ಸ್ವಂತಿಕೆಯ ನಿರ್ದೇಶನದ ಯಾವುದೇ ವಿಷಯವನ್ನು ಕುರಿತು ಕಿರು ಚಿತ್ರ ನಿರ್ಮಿಸಬಹುದು. ಹಾಸ್ಯ ಕಥಾನಕವುಳ್ಳ ಕಿರುಚಿತ್ರಗಳಿಗೆ ವಿಶೇಷ ಆದ್ಯತೆಯಿದೆ ಎಂದಿದ್ದಾರೆ.

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರು, ಕಲಾವಿದರು ತೀರ್ಪುಗಾರರಾಗಿ ಪಾಲ್ಗೊಳ್ಳಲಿದ್ದು, ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ರೂ. 50,000ರೂಗಳ ಪ್ರಥಮ ಬಹುಮಾನ, ರೂ. 30,000 ರೂ.ಗಳ ದ್ವಿತೀಯ ಬಹುಮಾನ ಜೊತೆಗೆ ಶ್ರೇಷ್ಟ ನಟ, ಶ್ರೇಷ್ಟ ನಟಿ, ಶ್ರೇಷ್ಟ ನಿರ್ದೇಶಕ, ಶ್ರೇಷ್ಟ ಕಥೆ-ಚಿತ್ರಕಥೆ, ಶ್ರೇಷ್ಟ ಛಾಯಾಗ್ರಹಣ, ಶ್ರೇಷ್ಟ ಸಂಗೀತ, ಶ್ರೇಷ್ಟ ಸಂಗೀತ ವಿಭಾಗಗಳಲ್ಲಿ ಹತ್ತು ಮಂದಿಗೆ ತಲಾ 5000 ನಗದು ಆಕರ್ಷಣೀಯ ಸ್ಮರಣಿಕೆಗಳಿವೆ. ಪ್ರಶಸ್ತಿ ಪುರಸ್ಕೃತರಿಗೆ ಅಕ್ಟೋಬರ್ ಮಾಸಾಂತ್ಯದಲ್ಲಿ, ನಡೆಯುವ ವರ್ಣರಂಜಿತ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.

Shivamogga Chitra Samaja ಕಿರು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು 1000 ರೂ.ಗಳ ಪ್ರವೇಶ ಶುಲ್ಕವಿದ್ದು, ಅರ್ಜಿಗಳನ್ನು ಬಿ.ಹೆಚ್. ರಸ್ತೆಯ ದೀಪಕ್ ಪೆಟ್ರೋಲ್ ಬಂಕ್‌ನಲ್ಲಿ ಪಡೆದು, ಭರ್ತಿ ಮಾಡಿ ಜು. 31ರ ಒಳಗಾಗಿ ಸಲ್ಲಿಸಬಹುದು. ಕಿರು ಚಿತ್ರಗಳನ್ನು ನಾಲ್ಕು ಹೆಚ್‌ಡಿ ಶ್ರೇಣಿಯ ಡಿವಿಡಿ ಸಹಿತ ಆ. 30, 2024 ಒಳಗಾಗಿ ಸಲ್ಲಿಸಬಹುದು.

ಸ್ಪರ್ಧೆಯ ವಿವರಗಳಿಗೆ ವೈದ್ಯ ಸಂಚಾಲಕರು 9844456505), ಡಾ. ನಾಗಭೂಷಣ 9449284495 ಮಂಜುನಾಥ್ (9686559950)ರವರನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...