Sunday, December 14, 2025
Sunday, December 14, 2025

R.M. Manjunath Gowda ತೀರ್ಥಹಳ್ಳಿಯ ಕೆಲ ಕಟ್ಟಡಗಳ ಕಳಪೆ ಕಾಮಗಾರಿ, ಶಾಸಕ ಆರಗ ಅವರು ನೈತಿಕ ಹೊಣೆ ಹೊರಬೇಕು- ಆರ್.ಎಂ.ಮಂಜುನಾಥ ಗೌಡ

Date:

R.M. Manjunath Gowda ತೀರ್ಥಹಳ್ಳಿಯಲ್ಲಿ ಇತ್ತೀಚೆಗೆ ಉದ್ಘಾಟನೆಗೊಂಡ ತಾಲೂಕು ಪಂಚಾಯತಿ ನೂತನ ಕಟ್ಟಡ, ಪೋಲಿಸ್, ಅಗ್ನಿ ಶಾಮಕ ದಳ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡಗಳು ಸೋರುತ್ತಿದ್ದು, ಕಳಪೆ ಕಾಮಗಾರಿ ಮತ್ತು ಭೃಷ್ಟಚಾರ ನಡೆದಿದೆ. ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಇದರ ಹೊಣೆ ಹೊರಬೇಕು ಎಂದು ಕಾಂಗ್ರೆಸ್ ಮುಖಂಡ ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಆರ್.ಎಂ. ಮಂಜುನಾಥ್ ಗೌಡ ಅವರು ಆಗ್ರಹಿಸಿದರು.
ತೀರ್ಥಹಳ್ಳಿಯ ಕಾಂಗ್ರೆಸ್ ಕಚೇರಿ ಗಾಂಧಿ ಭವನದಲ್ಲಿ ಜು. 17 ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಗೌಡ ಅವರು, ಕಳಪೆ ಕಾಮಗಾರಿಯಿಂದಾಗಿ ಕಟ್ಟಿದ ಕೆಲವೇ ದಿನಗಳಲ್ಲಿ ಸರ್ಕಾರಿ ಕಟ್ಟಡಗಳು ಸೋರಲಾರಂಭಿಸಿವೆ. ಬಿರುಸಾದ ಮಳೆ ಈಗ 2-3 ದಿನಗಳಿಂದ ಬರುತ್ತಿದೆಯಷ್ಟೆ. ಆದರೆ ಕೆಲವು ದಿನಗಳ ಹಿಂದೆಯೇ ಸಣ್ಣ ಮಳೆಗೂ ನೂತನ ತಾಲೂಕು ಪಂಚಾಯತಿ ಕಟ್ಟಡ ಸೋರುತ್ತಿದೆಯೆಂದರೆ ಏನರ್ಥ ಎಂದು ಪ್ರಶ್ನಿಸಿದರು.
R.M. Manjunath Gowda ತಾನಂತೂ ಯಾವುದೇ ಗುತ್ತಿಗೆದಾರನ ಬಳಿ ತನ್ನ ಜೀವಮಾನದಲ್ಲಿಯೇ ಕೈಯೊಡ್ಡಿಲ್ಲ. ರಾಜಕಾರಣದಲ್ಲೂ ಮುಂದೊಂದು ಹಿಂದೊಂದು ಮಾಡುವ ಅಭ್ಯಾಸ ತನ್ನದಲ್ಲ. ಮಾಧ್ಯಮದವರು ನೂತನ ಕಟ್ಟಡಗಳ ಕಳಪೆ ಕಾಮಗಾರಿಗಳ ಕುರಿತು ಬೆಳಕು ಚೆಲ್ಲಿ ಉತ್ತಮ ಕಾರ್ಯ ಮಾಡಿದ್ದಾರೆ ಎಂದು ಮಂಜುನಾಥ ಗೌಡರು ಶ್ಲಾಘಿಸಿದರು.
ತೀರ್ಥಹಳ್ಳಿ ತಾಲೂಕಿನಲ್ಲಿ ಎಲ್ಲಾ ಸಮುದಾಯದವರ ಭವನಗಳಿಗೆ ಕರ್ನಾಟಕ ನೀರಾವರಿ ನಿಗಮದಿಂದ ಸಂಸದ ರಾಘವೇಂದ್ರ ಅವರು ಅನುದಾನವನ್ನು ನೀಡಿರುವುದು ಸಂಸದರ ನಿಧಿ ಹೇಗಾಗುತ್ತದೆ. ಇದು ಕೂಡ ರಾಜ್ಯ ಸರ್ಕಾರದ್ದೆ ಹಣ ಎಂದು ಮಂಜುನಾಥ ಗೌಡರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಸ್ತೂರು ಮಂಜುನಾಥ್, ಮಾಜಿ ಜಿ.ಪಂ.ಸದಸ್ಯ ಹಾರೋಗೊಳಿಗೆ ಪದ್ಮನಾಭ್ , ಮುಖಂಡರಾದ ಡಿ.ಎಸ್. ವಿಶ್ವನಾಥ ಶೆಟ್ಟಿ, ಎಲಪ್ಪ, ಬಿ.ಆರ್. ರಾಘವೇಂದ್ರ ಶೆಟ್ಟಿ, ನಾಬಳ ಶಚ್ಚೀಂದ್ರ ಹೆಗ್ಡೆ, ಪ.ಪಂ. ಸದಸ್ಯರಾದ ರಹಮತುಲ್ಲಾ ಅಸಾದಿ, ಗೀತಾ ರಮೇಶ್, ಸುಶೀಲಾ ಶೆಟ್ಟಿ, ರತ್ನಾಕರ ಶೆಟ್ಟಿ, ಮಂಜುಳಾ ನಾಗೇಂದ್ರ ಮುಂತಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...