Saturday, August 29, 2026
Saturday, August 29, 2026

Bigg Boss Kannada  ಬಿಗ್ ಬಾಸ್ 11 ಶುರುವಾಗುವ ಸಮಯ ಬರುತ್ತಿದೆ. ನಿರೀಕ್ಷಿಸಿ

Date:

Bigg Boss Kannada  ‘ಬಿಗ್ ಬಾಸ್ ಕನ್ನಡ ಸೀಸನ್ 10’ ಯಶಸ್ವಿಯಾಗಿ ಮುಗಿದಿದೆ. ಈಗ ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶುರುವಾಗುವ ಸಮಯ ಹತ್ತಿರ ಬಂದಿದೆ. ಹೌದು, ಅಕ್ಟೋಬರ್ 3ನೇ ವಾರದಿಂದ ಹೊಸ ಸೀಸನ್ ಆರಂಭವಾಗಲಿದೆಯಂತೆ.
ತಯಾರಿ ಶುರು ಆಗಿದೆ!
‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋ ಅಕ್ಟೋಬರ್‌ನಲ್ಲಿ ಆರಂಭವಾಗುವುದು ಎಂಬ ಮಾತು ಕೇಳಿ ಬರುತ್ತಿದೆ. ಈ ಬಗ್ಗೆ ವಾಹಿನಿ ಯಾವುದೇ ಅಧಿಕೃತ ಮಾಹಿತಿ ಕೊಟ್ಟಿಲ್ಲ. ಹಾಗೆಯೇ ಒಂದಷ್ಟು ಸ್ಪರ್ಧಿಗಳ ಹೆಸರು ಕೂಡ ಕೇಳಿ ಬರುತ್ತಿದೆ. ಈಗಾಗಲೇ ವಾಹಿನಿಯು ಇದಕ್ಕೆ ಸಂಬಂಧಪಟ್ಟಂತೆ ತಯಾರಿಯನ್ನು ಶುರು ಮಾಡಿದೆ. ಈ ಮನೆಗೋಸ್ಕರ 300 ಜನರು ಕೆಲಸ ಮಾಡುತ್ತಿರುತ್ತಾರೆ. ದೊಡ್ಡ ಮನೆ, ಅದಕ್ಕೆ ಬೇಕಾದ ಸಾಮಗ್ರಿಗಳು, ಸ್ಪರ್ಧಿಗಳಿಗೋಸ್ಕರ ವ್ಯವಸ್ಥೆ ಹೀಗೆ ದೊಡ್ಡ ಮಟ್ಟದಲ್ಲಿ ತಯಾರಿ ಮಾಡಲು ತಿಂಗಳಾನುಗಟ್ಟಲೇ ಸಮಯ ಬೇಕು.

ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ
ಸ್ಪರ್ಧಿಗಳ ಆಯ್ಕೆ ಮಾಡೋದು ಕೂಡ ದೊಡ್ಡ ಟಾಸ್ಕ್. ಇಲ್ಲಿ ವಿಭಿನ್ನ ಕಾರ್ಯಕ್ಷೇತ್ರಗಳಿಂದ ಬರುವ ಸ್ಪರ್ಧಿಗಳ ಹೊರತಾಗಿ, ವಿಭಿನ್ನ ಮನಸ್ಥಿತಿಯುಳ್ಳವರು ಬೇಕು. ಹಾಗಾಗಿ ಸ್ಪರ್ಧಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯೇ ದೊಡ್ಡದು ಎನ್ನಬಹುದು.

Bigg Boss Kannada  ಸ್ಪರ್ಧಿಗಳು ಯಾರು ಯಾರು?
‘ಬೃಂದಾವನ’ ಧಾರಾವಾಹಿ ನಟ ವರುಣ್ ಆರಾಧ್ಯ, ಯುಟ್ಯೂಬರ್ ವರ್ಷಾ ಕಾವೇರಿ, ನಟ ತ್ರಿವಿಕ್ರಮ್, ‘ತುಕಾಲಿ ಸ್ಟಾರ್’ ಸಂತು ಪತ್ನಿ ಮಾನಸಾ, ‘ಮಜಾಭಾರತ’ ಖ್ಯಾತಿಯ ರಾಘವೇಂದ್ರ, ಸುನೀಲ್ ರಾವ್, ಭವ್ಯಾ ಗೌಡ, ಮೋಕ್ಷಿತಾ ಪೈ, ರೀಲ್ಸ್ ರೇಷ್ಮಾ ಹೀಗೆ ಒಂದಷ್ಟು ಸ್ಪರ್ಧಿಗಳ ಹೆಸರು ಕೇಳಿ ಬರುತ್ತಿದೆ. ‘ಬಿಗ್ ಬಾಸ್’ ಮನೆಗೆ ಹೋಗುವವರು ಯಾರೂ ಕೂಡ ತಾವು ದೊಡ್ಮನೆಗೆ ಹೋಗ್ತೀವಿ ಅಂತ ಹೇಳೋದಿಲ್ಲ. ‘ಬಿಗ್ ಬಾಸ್’ ಪ್ರಸಾರ ಆದಮೇಲೆ ಯಾರು ಸ್ಪರ್ಧಿಗಳು ಎನ್ನೋದು ಗೊತ್ತಾಗುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಕೆ : ಬಿ.ವೈ.ವಿಜಯೇಂದ್ರ

B.Y. Vijayendra ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರವನ್ನು ನಾನು...

B.Y. Raghavendra ಶಿವಮೊಗ್ಗದಿಂದ ಆಂಧ್ರದ ಮಚಿಲಿಪಟ್ಣಂ ಗೆ ವಿಶೇಷ ರೈಲು – ಸಂಸದ ಬಿ.ವೈ‌ರಾಘವೇಂದ್ರ

B.Y. Raghavendra ಶಿವಮೊಗ್ಗ ಜನತೆಗೆ ಮತ್ತೊಂದು ವಿಶೇಷ ಸಿಹಿಸುದ್ದಿ ದೊರೆತಿದ್ದು, ಆಂಧ್ರ...

B.Y. Raghavendra ಕಸ್ತೂರಿ ರಂಗನ್ ವರದಿ ಕರಡು ಜಾರಿ ಬಗ್ಗೆ ಪಕ್ಷದ ಸಭೆಯಲ್ಲಿ ಸುದೀರ್ಘ ಚರ್ಚೆ- ಬಿ.ವೈ.ರಾಘವೇಂದ್ರ

B.Y. Raghavendra ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ...

Klive Special Article ಕರೆದರೆ ಬರಬಾರದೆ?ಶ್ರೀರಾಯರ ಆರಾಧನಾ ವಿಶೇಷ ಲೇಖನ.ಕರ್ತೃ: ಎನ್.ಜಯಭೀಮ ಜೊಯ್ಸ್, ಶಿವಮೊಗ್ಗ.

Klive Special Article “ಕರೆದರೆ ಬರಬಾರದೇ ಗುರು ರಾಘವೇಂದ್ರ/ವರ ಮಂತ್ರಾಲಯ ಪುರ...