Friday, June 13, 2025
Friday, June 13, 2025

Bigg Boss Kannada  ಬಿಗ್ ಬಾಸ್ 11 ಶುರುವಾಗುವ ಸಮಯ ಬರುತ್ತಿದೆ. ನಿರೀಕ್ಷಿಸಿ

Date:

Bigg Boss Kannada  ‘ಬಿಗ್ ಬಾಸ್ ಕನ್ನಡ ಸೀಸನ್ 10’ ಯಶಸ್ವಿಯಾಗಿ ಮುಗಿದಿದೆ. ಈಗ ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶುರುವಾಗುವ ಸಮಯ ಹತ್ತಿರ ಬಂದಿದೆ. ಹೌದು, ಅಕ್ಟೋಬರ್ 3ನೇ ವಾರದಿಂದ ಹೊಸ ಸೀಸನ್ ಆರಂಭವಾಗಲಿದೆಯಂತೆ.
ತಯಾರಿ ಶುರು ಆಗಿದೆ!
‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋ ಅಕ್ಟೋಬರ್‌ನಲ್ಲಿ ಆರಂಭವಾಗುವುದು ಎಂಬ ಮಾತು ಕೇಳಿ ಬರುತ್ತಿದೆ. ಈ ಬಗ್ಗೆ ವಾಹಿನಿ ಯಾವುದೇ ಅಧಿಕೃತ ಮಾಹಿತಿ ಕೊಟ್ಟಿಲ್ಲ. ಹಾಗೆಯೇ ಒಂದಷ್ಟು ಸ್ಪರ್ಧಿಗಳ ಹೆಸರು ಕೂಡ ಕೇಳಿ ಬರುತ್ತಿದೆ. ಈಗಾಗಲೇ ವಾಹಿನಿಯು ಇದಕ್ಕೆ ಸಂಬಂಧಪಟ್ಟಂತೆ ತಯಾರಿಯನ್ನು ಶುರು ಮಾಡಿದೆ. ಈ ಮನೆಗೋಸ್ಕರ 300 ಜನರು ಕೆಲಸ ಮಾಡುತ್ತಿರುತ್ತಾರೆ. ದೊಡ್ಡ ಮನೆ, ಅದಕ್ಕೆ ಬೇಕಾದ ಸಾಮಗ್ರಿಗಳು, ಸ್ಪರ್ಧಿಗಳಿಗೋಸ್ಕರ ವ್ಯವಸ್ಥೆ ಹೀಗೆ ದೊಡ್ಡ ಮಟ್ಟದಲ್ಲಿ ತಯಾರಿ ಮಾಡಲು ತಿಂಗಳಾನುಗಟ್ಟಲೇ ಸಮಯ ಬೇಕು.

ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ
ಸ್ಪರ್ಧಿಗಳ ಆಯ್ಕೆ ಮಾಡೋದು ಕೂಡ ದೊಡ್ಡ ಟಾಸ್ಕ್. ಇಲ್ಲಿ ವಿಭಿನ್ನ ಕಾರ್ಯಕ್ಷೇತ್ರಗಳಿಂದ ಬರುವ ಸ್ಪರ್ಧಿಗಳ ಹೊರತಾಗಿ, ವಿಭಿನ್ನ ಮನಸ್ಥಿತಿಯುಳ್ಳವರು ಬೇಕು. ಹಾಗಾಗಿ ಸ್ಪರ್ಧಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯೇ ದೊಡ್ಡದು ಎನ್ನಬಹುದು.

Bigg Boss Kannada  ಸ್ಪರ್ಧಿಗಳು ಯಾರು ಯಾರು?
‘ಬೃಂದಾವನ’ ಧಾರಾವಾಹಿ ನಟ ವರುಣ್ ಆರಾಧ್ಯ, ಯುಟ್ಯೂಬರ್ ವರ್ಷಾ ಕಾವೇರಿ, ನಟ ತ್ರಿವಿಕ್ರಮ್, ‘ತುಕಾಲಿ ಸ್ಟಾರ್’ ಸಂತು ಪತ್ನಿ ಮಾನಸಾ, ‘ಮಜಾಭಾರತ’ ಖ್ಯಾತಿಯ ರಾಘವೇಂದ್ರ, ಸುನೀಲ್ ರಾವ್, ಭವ್ಯಾ ಗೌಡ, ಮೋಕ್ಷಿತಾ ಪೈ, ರೀಲ್ಸ್ ರೇಷ್ಮಾ ಹೀಗೆ ಒಂದಷ್ಟು ಸ್ಪರ್ಧಿಗಳ ಹೆಸರು ಕೇಳಿ ಬರುತ್ತಿದೆ. ‘ಬಿಗ್ ಬಾಸ್’ ಮನೆಗೆ ಹೋಗುವವರು ಯಾರೂ ಕೂಡ ತಾವು ದೊಡ್ಮನೆಗೆ ಹೋಗ್ತೀವಿ ಅಂತ ಹೇಳೋದಿಲ್ಲ. ‘ಬಿಗ್ ಬಾಸ್’ ಪ್ರಸಾರ ಆದಮೇಲೆ ಯಾರು ಸ್ಪರ್ಧಿಗಳು ಎನ್ನೋದು ಗೊತ್ತಾಗುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...