Thursday, June 18, 2026
Thursday, June 18, 2026

Gajanur Dam ಎಡಬಿಡದ ಮಳೆಯಿಂದಾಗಿ ಗಾಜನೂರು ಜಲಾಶಯಕ್ಕೆ ಹೆಚ್ಚುತ್ತಿರುವ ನೀರಿನ ಒಳಹರಿವು

Date:

Gajanur Dam ನಾಡಿನ ಜೀವ ನದಿಗಳಲ್ಲೊಂದಾದ ತುಂಗಾ ನದಿ ಪ್ರಸ್ತುತ ಮೈದುಂಬಿ ಹರಿಯುತ್ತಿದೆ. ಜೊತೆಗೆ ಪ್ರವಾಹದ ಭೀತಿ (ಸೃಷ್ಟಿಸಿದೆ. ಕೆಲವೆಡೆ ನದಿಪಾತ್ರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.
ಈ ನಡುವೆ ತೀರ್ಥಹಳ್ಳಿ ಆಗುಂಬೆ , ಶೃಂಗೇರಿ ಸುತ್ತಮುತ್ತ ಭಾರೀ ಮಳೆ ಮುಂದುವರಿದಿದೆ. ಇದರಿಂದ ಶಿವಮೊಗ್ಗ ತಾಲೂಕಿನ ತುಂಗಾ ಜಲಾಶಯದ ಒಳಹರಿವಿನಲ್ಲಿ ನಿರಂತರ ಹೆಚ್ಚಳ ಕಂಡುಬರಲಾರಂಭಿಸಿದೆ.
ಗುರುವಾರ ಬೆಳಿಗ್ಗೆಯ ಮಾಹಿತಿಯಂತೆ ತುಂಗಾ ಜಲಾಶಯಕ್ಕೆ 71,484 ಕ್ಯೂಸೆಕ್ ಒಳಹರಿವಿದೆ ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ ಅಷ್ಟೇ ಪ್ರಮಾಣದ ನೀರನ್ನು ಹೊರ ಹರಿಸಲಾಗುತ್ತಿದೆ
Gajanur Dam ಡ್ಯಾಂನಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಶಿವಮೊಗ್ಗ ನಗರದ ಮೂಲಕ ಹಾದು ಹೋಗಿರುವ ತುಂಗಾ ನದಿಯು ಕಳೆದ ಮೂರು ದಿನಗಳಿಂದ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಡ್ಯಾಂನಿಂದ ಬಿಡುವ ನೀರಿನಲ್ಲಿ ಹೆಚ್ಚಳವಾದರೆ, ನಗರದ ನದಿಯಂಚಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆಯಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...