Thursday, June 18, 2026
Thursday, June 18, 2026

S.N. Chennabasappa ತುಂಗಾ ಪ್ರವಾಹ ನಿಯಂತ್ರಣ ಕಾಮಗಾರಿಗಳಿಗೆ ಅನುದಾನಕ್ಕೆ ಶಾಸಕ ‘ಚೆನ್ನಿ’ ಮನವಿ

Date:

S.N. Chennabasappa ಶಿವಮೊಗ್ಗ ನಗರದ ಮದರಿಪಾಳ್ಯದ ಕಲ್ಲೇಶ್ವರ ದೇವಸ್ಥಾನದ ಪಕ್ಕ ಹಾದು ಹೋಗುವ ತುಂಗಾ ನದಿಯ ಪ್ರವಾಹದಿಂದ ನಾಗರೀಕರ ಆಸ್ತಿಪಾಸ್ತಿ ಮನೆಗಳಿಗೆ ಹಾನಿಯಾಗುತ್ತಿದ್ದು, ಇದರ ರಕ್ಷಣೆಗಾಗಿ ತುಂಗಾ ನದಿಯ ಬಲದಂಡೆಗೆ ಸುಮಾರು ೧೦೦ ಮೀಟರ್ ಉದ್ದಕ್ಕೆ ರಕ್ಷಣಾ ಗೋಡೆಯನ್ನು ನಿರ್ಮಾಣ ಮಾಡಲು ಕರ್ನಾಟಕ ನೀರಾವರಿ ನಿಗಮ ನಿಯಮಿತ ಶಿವಮೊಗ್ಗ ಇವರಿಗೆ ಅನುದಾನವನ್ನು ಬಿಡುಗಡೆ ಮಾಡಲು ಶಾಸಕ ಎಸ್ ಎನ್. ಚನ್ನಬಸಪ್ಪ ಮನವಿ ಮಾಡಿದ್ದಾರೆ.

ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ, ಈ ಬಗ್ಗೆ ಅವರು ಮನವಿ ಸಲ್ಲಿಸಿದರು.

S.N. Chennabasappa ಭದ್ರಾ ಜಲಯಾನ ಪ್ರದೇಶದಲ್ಲಿ ಮಳೆಯ ನೀರುಕೆರೆ ಕಟ್ಟಿ ತುಂಬಿ ಭದ್ರಾ ಎಡದಂಡೆ ಕಾಲುವೆ ಮುಖಾಂತರ ಹರಿದು ಶಿವಮೊಗ್ಗ ನಗರದ ಅನೇಕ ಬಡಾವಣೆಗಳಲ್ಲಿ ನೀರು ನುಗ್ಗಿ ಪ್ರವಾಹ ಉಂಟಾಗಿ ಅನೇಕ ಆಸ್ತಿಪಾಸ್ತಿ ಮನೆಗಳಿಗೆ ಹಾನಿಯಾಗುತ್ತಿದೆ. ಹೆಚ್ಚುವರಿ ನೀರನ್ನು ಹೊರಗೆ ಹರಿದು ಬಿಡಲು ಬೀಡುಗುಂಡಿಗಳು ಲಭ್ಯವಿರದ ಕಾರಣ, ಭದ್ರಾ ಎಡದಂಡೆ ಕಾಲುವೆಯಲ್ಲಿ ಬೀಡುಗುಂಡಿಗಳನ್ನು ನಿರ್ಮಾಣಕ್ಕಾಗಿ ಅನುದಾನವನ್ನು ಬಿಡುಗಡೆ ಮಾಡಲು ಕೋರಿದರು.

ತುಂಗಾ ಮೇಲ್ದಂಡೆ ಯೋಜನೆಯಲ್ಲಿ ನಿಗಮದ ಜಾಗವನ್ನು ಒತ್ತುವರಿ ಮಾಡುವುದಲ್ಲದೆ ಜಾಗವನ್ನು ಕಬಳಿಸಲು ಪ್ರಯತ್ನಿಸುತ್ತಿರುವುದರಿಂದ ಸರದಿ ಕಾಲುವೆಯ ಎರಡು ಬದಿಗಳಲ್ಲಿ ಚೈನೇಜ್ ೧೦,೦೦೦ ಕಿಲೋಮೀಟರ್ ರಿಂದ ಚೈನೇಜ್ ೨೧,೦೦೦ ಕಿಲೋಮೀಟರ್ ವರೆಗೆ (ಒಟ್ಟು ೨೨ ಕಿಲೋಮೀಟರ್) ವೈರ್ ಫೆನ್ಸಿಂಗ್ ಮತ್ತು ಚೈನ್ ಲಿಂಕ್ ಫೆನ್ಸಿಂಗ್ ಕಾಮಗಾರಿಗಾಗಿ ಅನುದಾನ ಬಿಡುಗಡೆ ಮಾಡಲು ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...