Tuesday, July 28, 2026
Tuesday, July 28, 2026

Shivamogga Weather Forecast ಭಾರಿಮಳೆ, ಸಾಗರ, ಶಿಕಾರಿಪುರಗಳಲ್ಲಿ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್

Date:

Shivamogga Weather Forecast ಶಿವಮೊಗ್ಗ ಜಿಲ್ಲೆಯಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದ್ದು, ನದಿ ಮತ್ತು ಹಳ್ಳಗಳು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಎಸ್ ಪಿ ಮಿಥುನ್‌ಕುಮಾರ್ ನೆರೆಪೀಡಿತ ಪ್ರದೇಶಗಳಾದ ಶಿಕಾರಿಪುರದ ಅಂಜನಾಪುರ, ಕೊಟ್ಟ, ಕೊಡಸೂರು, ಸೊರಬದ ಅಂದವಳ್ಳಿ, ತಟ್ಟಿಗೆರೆ ಮತ್ತು ಸಾಗರದ ಸೈದೂರು, ಕೆಲವೆ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ನೆರೆ ಸಂಬಂಧ ಕೈಗೊಳ್ಳಬೇಕಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಸೂಚನೆಗಳನ್ನು ನೀಡಿದರು.

ನೆರೆ ಪೀಡಿತ ಪ್ರದೇಶಗಳಲ್ಲಿ ನದಿ ನೀರಿಗೆ ಇಳಿಯುವುದು, ಈಜಾಡುವುದು, ಅಪಾಯಕಾರಿ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವುದು, ಫೋಟೋ , ಸೆಲ್ಫಿ ತೆಗೆದುಕೊಳ್ಳುವುದು ಅಪಾಯಕಾರಿಯಾಗಿದೆ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ವತಿಯಿಂದ ಬ್ಯಾರಿಕೇಡ್ ಗಳನ್ನು ಹಾಕಿ, ಫ್ಲೆಕ್ಸ್ ಮತ್ತು ಸೂಚನಾ ಫಲಕಗಳನ್ನು ಅಳವಡಿಸಿ, ಸಿಬ್ಬಂಧಿಗಳನ್ನು ನಿಯೋಜಿಸಲಾಗಿದೆ.

Shivamogga Weather Forecast ಅಪಾಯದ ಬಗ್ಗೆ ಸ್ಥಳೀಯರಿಗೆ ಅರಿವು ಮೂಡಿಸಲಾಗುತ್ತಿದೆ ಎಂದಿದ್ದಾರೆ.

ಸಾರ್ವಜನಿಕರು ಮತ್ತು ಹೊರ ಜಿಲ್ಲೆಯ ಪ್ರವಾಸಿಗರು ನೀರಿನ ಹರಿವು ಕಡಿಮೆಯಾಗುವವರೆಗೆ ಈ ಭಾಗದ ಪ್ರವಾಸಿ ತಾಣಗಳಿಗೆ ಭೇಟಿ ನೀಡಬಾರದು. ನೆರೆ ಸಂಬಂಧ ಮತ್ತು ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ೧೧೨ ಸಹಾಯವಾಣಿಗೆ ಕರೆ ಮಾಡಿ ಸಹಾಯ ಪಡೆಯಬಹುದು ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka State Brahmin Development Board ವಿಪ್ರ ಸ್ವ- ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

Karnataka State Brahmin Development Board ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ...

Rotary Club of Shivamogga ವೈದ್ಯರು ಉಚಿತವಾಗಿ ನೀಡುವ ಸಲಹಾ ಸೌಲಭ್ಯ ಬಳಸಿಕೊಳ್ಳಿ- ಎನ್.ಗೋಪಿನಾಥ್

Rotary Club of Shivamogga ವೈದ್ಯರು ಉಚಿತವಾಗಿ ನೀಡುತ್ತಿರುವ ಸಲಹೆಗಳನ್ನು ಬಳಸಿಕೊಳ್ಳಿ...

Klive Special Article ತೆರಿಗೆಯು ಜೇನ್ನೊಣವು ಹೂವಿನಿಂದ ಜೇನು ಸಂಗ್ರಹಿಸುವಂತೆ ಇರಬೇಕು

ವಿಶೇಷ ಲೇಖನ: ಆರ್.ಮನೋಹರ್.ತೆರಿಗೆ ಸಲಹೆಗಾರ. ಶಿವಮೊಗ್ಗ. Klive Special Article ಆದಾಯ ತೆರಿಗೆ...