Tuesday, July 28, 2026
Tuesday, July 28, 2026

Malnad Development Foundation ಕಾಲೇಜು ಹಂತದಲ್ಲಿನ ಸ್ನೇಹ,ಕ್ರೀಡೆ &‌ ಮಾನವೀಯ ಸಂಬಂಧಗಳು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ- ಡಾ.ಯತೀಶ್

Date:

Malnad Development Foundation ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ (ರಿ.) ಡಾ. ಜಿ.ಎ. ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯ, ಸಾಗರ
ಇದರ 2023-24ನೇ ಶೈಕ್ಷಣಿಕ ಸಾಲಿನ ಪ್ರಥಮ ಬಿ.ಇಡಿ. ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಏರ್ಪಡಿಸಲಾಗಿತ್ತು.

ಸಮಾರಂಭದ ಉದ್ಘಾಟಕರಾಗಿ ಶ್ರೀ ಡಾ.ಯತೀಶ ಆರ್, ಉಪವಿಭಾಗಾಧಿಕಾರಿಗಳು, ಸಾಗರಇವರು ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತ “ಕಾಲೇಜು ಹಂತದಲ್ಲಿ ಸ್ನೇಹಿತರಕೂಟ,ಕ್ರೀಡೆ, ಮಾನವಿಯ ಸಂಭಂಧಗಳು ಬೆಳಸಿಕೋಂಡಗ ನಮ್ಮ ಭವಿಷ್ಯವನ್ನು ನಿರ್ಧರಿಸುತ್ತೆದೆ. ನನ್ನ ಶೈಕ್ಷಣಿಕಜೀವನದ ಮೇಲೆ ಪ್ರಭಾವ ಬೀರಿದ ಐದು ಜನ ಶಿಕ್ಷಕರ ವ್ಯಕ್ತಿತ್ವದ ಸ್ಮರಣೆಯೊಂದೆ ನನ್ನ ಜಿವನ ದಿಕ್ಕು ಬದಲಿಸಿತ್ತು ನಿವೊ ಜ್ಞಾನವಂತರಾದರೆ ಪ್ರಪಂಚದ ಮೂಲೆಮೂಲೆಗಳಲ್ಲೂ ಗೌರವಕ್ಕೆ ಪಾತ್ರರಾಗುವಿರಿ, ಸುಖ ಸಂತೋಷ ನಿಮ್ಮದಾಗಲ್ಲಿ ಎಂದು ತಿಳಿಸಿದರು.

ಸಂಸ್ಥೆಯ ಉಪಾಧ್ಯಕ್ಷರಾದಬಿ.ಆರ್. ಜಯಂತರವರು ಯುವಜನತೆ ಮತ್ತುದೇಶದಅಭಿವೃದ್ಧಿಕುರಿತುಮಹಾತ್ಮಗಾಂಧಿಜಿಯವರ ಹೋರಾಟವನ್ನು ಉಲ್ಲೇಖಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕಳೆದ ಸಾಲಿನಲ್ಲಿಅತಿ ಹೆಚ್ಚು ಅಂಕಗಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

Malnad Development Foundation ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಎಂ. ಹರನಾಥರಾವ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಂ.ಡಿ.ಎಫ್.ನ ಪ್ರಧಾನ ಕಾರ್ಯದರ್ಶಿಗಳಾದ ಡಾ. ಹೆಚ್.ಎಂ. ಶಿವಕುಮಾರ್, ಸಹಕಾರ್ಯದರ್ಶಿಗಳಾದ ಶ್ರೀ ಸತ್ಯನಾರಾಯಣ ಎಂ. ಆರ್. ಹಾಗೂ ಪ್ರಾಂಶುಪಾಲರಾದ ಡಾ. ಶಿಲ್ಪ ವಿ.ಎನ್. ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಮೇಘ ಹೆಚ್.ಎಂ. ಮತ್ತು ವಿದ್ಯಾಈಶ್ವರ ನಾಯಕ್ ನಿರೂಪಿಸಿದರು. ಅಕ್ಷತಾ ಬಿ.ಎನ್.ವಂದಿಸಿದರು. ಕಾರ್ಯಕ್ರಮದಲ್ಲಿ ಪ್ರಥಮ ಮತ್ತು ದ್ವಿತೀಯ ಬಿ.ಇಡಿ., ಪ್ರಶಿಕ್ಷಣಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka State Brahmin Development Board ವಿಪ್ರ ಸ್ವ- ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

Karnataka State Brahmin Development Board ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ...

Rotary Club of Shivamogga ವೈದ್ಯರು ಉಚಿತವಾಗಿ ನೀಡುವ ಸಲಹಾ ಸೌಲಭ್ಯ ಬಳಸಿಕೊಳ್ಳಿ- ಎನ್.ಗೋಪಿನಾಥ್

Rotary Club of Shivamogga ವೈದ್ಯರು ಉಚಿತವಾಗಿ ನೀಡುತ್ತಿರುವ ಸಲಹೆಗಳನ್ನು ಬಳಸಿಕೊಳ್ಳಿ...

Klive Special Article ತೆರಿಗೆಯು ಜೇನ್ನೊಣವು ಹೂವಿನಿಂದ ಜೇನು ಸಂಗ್ರಹಿಸುವಂತೆ ಇರಬೇಕು

ವಿಶೇಷ ಲೇಖನ: ಆರ್.ಮನೋಹರ್.ತೆರಿಗೆ ಸಲಹೆಗಾರ. ಶಿವಮೊಗ್ಗ. Klive Special Article ಆದಾಯ ತೆರಿಗೆ...