Monday, May 4, 2026
Monday, May 4, 2026

Job Reservation ಬಾಂಗ್ಲಾದೇಶವಾಸಿ ಭಾರತೀಯರಿಗೆ ಕೇಂದ್ರ ಸರ್ಕಾರದಿಂದ ಸಲಹಾ ಸೂಚಿ ಬಿಡುಗಡೆ

Date:

Job Reservation ಬಾಂಗ್ಲಾದೇಶದಲ್ಲಿ ಉದ್ಯೋಗ ಮೀಸಲಾತಿಗಾಗಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿರುವ ಭಾರತೀಯ ಪ್ರಜೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಲಹಾ ಸೂಚಿ ಬಿಡುಗಡೆ ಮಾಡಿರುವ ಭಾರತ, ತಾವು ವಾಸಿಸುತ್ತಿರುವ ಮನೆಗಳಿಂದ ಹೊರ ಬರಬೇಡಿ ಹಾಗೂ ಪ್ರವಾಸಗಳನ್ನು ತಡೆ ಹಿಡಿಯಿರಿ ಎಂದು ಸಲಹೆ ನೀಡಿದೆ.

ಇದರೊಂದಿಗೆ ಕೆಲವು 24 ಗಂಟೆಗಳ ತುರ್ತು ಸಹಾಯವಾಣಿಯನ್ನೂ ಭಾರತ ಬಿಡುಗಡೆ ಮಾಡಿದೆ.

“ಒಂದು ವೇಳೆ ಏನಾದರೂ ತುರ್ತಿದ್ದರೆ ಅಥವಾ ನೆರವಿನ ಅಗತ್ಯವಿದ್ದರೆ, ದಯವಿಟ್ಟು ನಮ್ಮ ಹೈಕಮಿಷನ್ ಹಾಗೂ ಸಹಾಯಕ ಹೈಕಮಿಷನ್ ಕಚೇರಿಗಳನ್ನು ಸಂಪರ್ಕಿಸಿ”” ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

Job Reservation ಸರಕಾರಿ ಉದ್ಯೋಗ ನೇಮಕಾತಿ ವ್ಯವಸ್ಥೆಯಲ್ಲಿ ತರಲು ಬಯಸಿರುವ ಮೀಸಲಾತಿಯನ್ನು ಸುಧಾರಿಸಬೇಕು ಎಂದು ಆಗ್ರಹಿಸಿ ಹಾಗೂ ಭದ್ರತಾ ಪಡೆಗಳ ಕ್ರಮವನ್ನು ಖಂಡಿಸಿ ಬುಧವಾರ ಪ್ರತಿಭಟನಾನಿರತ ವಿದ್ಯಾರ್ಥಿಗಳು ಗುರುವಾರ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದರು. ಈ ಮುಷ್ಕರದ ಸಂದರ್ಭದಲ್ಲಿ ಹಿಂಸಾಚಾರದ ಘಟನೆಗಳು ಭುಗಿಲೆದ್ದಿವೆ. ಈ ಹಿನ್ನೆಲೆಯಲ್ಲಿ ಭಾರತ ಸರಕಾರವು ಬಾಂಗ್ಲಾದೇಶದಲ್ಲಿರುವ ಭಾರತೀಯ ಪ್ರಜೆಗಳು ಹಾಗೂ ವಿದ್ಯಾರ್ಥಿಗಳಿಗೆ ಗುರುವಾರ ಸಲಹಾ ಸೂಚಿ ಬಿಡುಗಡೆ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...