Monday, December 15, 2025
Monday, December 15, 2025

Rotary Shivamogga ಪೋಷಕರ ನಡೆವಳಿಕೆ& ಜೀವನ ಶೈಲಿ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ- ಡಾ.ವಿದ್ಯಾ ರಘುದತ್

Date:

Rotary Shivamogga ಪೋಷಕರು ನಡೆದುಕೊಳ್ಳುವ ರೀತಿ ಹಾಗೂ ಜೀವನಶೈಲಿಯು ಮಕ್ಕಳ ವ್ಯಕ್ತಿತ್ವ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರುತ್ತವೆ ಎಂದು ಮಾನಸ ನರ್ಸಿಂಗ್ ಹೋಂ ಹಿರಿಯ ಸಲಹೆಗಾರ್ತಿ ಡಾ. ವಿದ್ಯಾ ರಘುದತ್ ಜವಳಿ ಹೇಳಿದರು.

ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳ ವ್ಯಕ್ತಿತ್ವ ಬೆಳವಣಿಗೆಯ ಮೇಲೆ ಪೋಷಕರ ಪ್ರಭಾವ ಕುರಿತು ಮಾತನಾಡಿ, ಮಕ್ಕಳು ಭ್ರೂಣಾವಸ್ಥೆಯಲ್ಲಿ ಇರುವಾಗಲೇ ಹೊರಗಿನ ಪ್ರಪಂಚ ಹಾಗೂ ತಾಯಿಯ ಮಾನಸಿಕ ಸ್ಥಿತಿಗೆ ಅನುಗುಣವಾಗಿ ಬೆಳೆದು ನಂತರ ಮೂರನೇ ಒಂದು ಭಾಗದಷ್ಟು ಅನುವಂಶೀಯ ನಡೆ ನಡಾವಳಿ ಹಾಗೂ ಮೂರನೇ ಒಂದು ಭಾಗದಷ್ಟು ಪೋಷಕರ ನಡೆ ನುಡಿಗಳು ಹಾಗೂ ಮಕ್ಕಳ ಅಂದಿನ ಒಡನಾಟ ಮತ್ತು ಸಂಬಂಧಗಳ ಬಗ್ಗೆ ಪೂರಕವಾಗಿ ವಿಕಸಿತ ಹೊಂದುತ್ತವೆ ಎಂದು ತಿಳಿಸಿದರು.

ಸುತ್ತಮುತ್ತಲ ಪರಿಸರ, ಜ್ಞಾನ, ಗೆಳೆಯರು ಹಾಗೂ ನೆರಯವರಿಯವರಿಂದ ಇನ್ನುಳಿದ ಮೂರನೇ ಒಂದು ಭಾಗದಷ್ಟು ವಿಕಸಿತ ಮನಸ್ಥಿತಿ ಹೊಂದುತ್ತಾರೆ. ಜೀವನದ ವಿವಿಧ ಸ್ತರಗಳಲ್ಲಿ ವಿವಿಧ ರೀತಿಯ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಸಂಪೂರ್ಣ ಮಾನಸಿಕ ಹಾಗೂ ದೈಹಿಕ ಅಭಿವೃದ್ಧಿ ಸಾಧ್ಯ ಎಂದರು.

ಉತ್ತಮ ಪರಿಸರ ಮಕ್ಕಳ ಉತ್ತಮ ಮನಸ್ಥಿತಿಗೆ ಪೂರಕವಾಗಿ ಕೆಲಸ ಮಾಡುತ್ತದೆ. ಉತ್ತಮ ನಡವಳಿಕೆಗೆ ದಾರಿ ಮಾಡಿಕೊಡುತ್ತದೆ. ಕಾಲಕ್ಕೆ ತಕ್ಕಂತೆ ಬದಲಾದ ತಂತ್ರಜ್ಞಾನಗಳು ಮಕ್ಕಳ ದಿನಚರಿ ಬದಲಿಸಿ ಪೋಷಕರೊಂದಿಗೆ ಒಡನಾಟಗಳು ಕಡಿಮೆಯಾಗಿ ಮಾನಸಿಕ ಅಸ್ವಸ್ಥತೆ ಉಂಟಾಗುತ್ತಿದ್ದು, ಅವರನ್ನು ಉತ್ತಮ ದಾರಿಗೆ ತರಲು ಪೋಷಕರ ಜವಾಬ್ದಾರಿ ಹೆಚ್ಚು ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಅತಿಯಾದ ಮುದ್ದಿನಿಂದ ಮಕ್ಕಳು ನಿಜವಾದ ಜೀವನದ ಕಷ್ಟ ಸುಖಗಳನ್ನ ತಿಳಿದುಕೊಳ್ಳುವುದರಲ್ಲಿ ಹಿಂದೆ ಬಿದ್ದಿದ್ದಾರೆ. ಪೋಷಕರು ಮಕ್ಕಳಿಗೆ ಸ್ವತಂತ್ರ ಜೀವನ ನಡೆಸುವುದನ್ನು ಕಲಿಸಲು ವಿಫಲರಾಗಿದ್ದಾರೆ. ಕಷ್ಟದ ಪರಿಸ್ಥಿತಿಯನ್ನು ಎದುರಿಸುವ ಮಾನಸಿಕತೆಯನ್ನು ಬೆಳೆಸುವಲ್ಲಿ ವಿಫಲರಾಗಿ ಮಕ್ಕಳಲ್ಲಿ ಖಿನ್ನತೆ ಆತ್ಮಹತ್ಯೆಯಂತಹ ಮಾನಸಿಕತೆಗಳು ಹೆಚ್ಚುತ್ತಿರುವುದು ಇದಕ್ಕೆ ನಿದರ್ಶನ ಎಂದು ತಿಳಿಸಿದರು.

Rotary Shivamogga ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಅರುಣ್ ದೀಕ್ಷಿತ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರೋಟರಿ ಸಂಸ್ಥೆಯು ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಆರೋಗ್ಯ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸೇವಾ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಶಶಿಕಾಂತ್ ನಾಡಿಗ್, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಕಿಶೋರ್ ಕುಮಾರ್, ವಸಂತ ಹೋಬಳಿದಾರ್, ಮಂಜುನಾಥ ರಾವ್ ಕದಂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...