Friday, March 20, 2026
Friday, March 20, 2026

Madhu Bangarappa ಕಳಪೆ ಕಾಮಗಾರಿ ಯಾರ ಸರ್ಕಾರದ ಕಾಲದಲ್ಲೇ ಆಗಿರಲಿ ಅದಕ್ಕೆ ಸೂಕ್ತ ಕ್ರಮ- ಸಚಿವ ಮಧು ಬಂಗಾರಪ್ಪ

Date:

Madhu Bangarappa ಮಲೆನಾಡಿನಲ್ಲಿ ಸೋರುವುದು ಸಹಜವಾಗಿರುತ್ತದೆ. ಆದರೆ ತಂಡಿ ಬಾರದ ರೀತಿಯಲ್ಲಿ ಮಾಡಿ ಎಂದು ಹೇಳಿದ್ದೆ, ಕಳಪೆ ಕಾಮಗಾರಿಗೆ ಸುಮ್ಮನಿರುತ್ತೀನಿ ಎಂದು ನಾನು ಯಾವತ್ತು ಹೇಳಿಲ್ಲ ಎಂದು ಶಿಕ್ಷಣ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ತೀರ್ಥಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆ ತಡೆಗೋಡೆ ಕುಸಿತ , ತಾಲೂಕು ಪಂಚಾಯತ್ ಕಟ್ಟಡ ಇರಲಿ ಅದರ ರಿಪೋರ್ಟ್ ತರಿಸಲು ಜಿಲ್ಲಾಧಿಕಾರಿಗಳ ಬಳಿ ಹೇಳಿದ್ದೇನೆ. ಕಳಪೆ ಕಾಮಗಾರಿ ಯಾರದ್ದೇ ಇದ್ದರು ಕೂಡ ಯಾರೇ ಮಾಡಿದ್ದರು ಕೂಡ, ಯಾರ ಸರ್ಕಾರದ್ದೆ ಆಗಿದ್ದರೂ ಕೂಡ ಸಾರ್ವಜನಿಕರ ತೆರಿಗೆ ಹಣ ದುರುಪಯೋಗ ಮಾಡಿ ಕಳಪೆ ಕಾಮಗಾರಿ ಮಾಡಿದ್ದರೆ ಅದಕ್ಕೆ ಏನು ಮಾಡಬೇಕೊ ಮಾಡುತ್ತೇವೆ ಎಂದರು.

ಯಾರೇ ಆಗಿರಲಿ ಬೆಳಗ್ಗೆ ಮೇಕಪ್ ಮಾಡಿದರೆ ರಾತ್ರಿ ತೆಗೆಯಲೇ ಬೇಕು, ಪರ್ಮನೆಂಟ್ ಇಟ್ಟುಕೊಂಡು ಓಡಾಡಲು ಆಗುವುದಿಲ್ಲ, ನಮ್ಮ ಕೆಲಸ ನಾವು ಮಾಡುತ್ತೇವೆ, ನಮ್ಮ ಹಾಗೂ ನಿಮ್ಮ (ಪತ್ರಕರ್ತರು ) ಕಂಡರೆ ಹೊಟ್ಟೆಕಿಚ್ಚು ಇರಬೇಕು ಸ್ವಲ್ಪ ಹುಷಾರಾಗಿರಿ, ಬರೆಯಬೇಕಾದರೆ ಅವರ ಬಗ್ಗೆ ಬರಿಯಬೇಕಾ? ಅಥವಾ ನಮ್ಮ ಬಗ್ಗೆ ಬರಿಯಬೇಕಾ ಎಂದು ಯೋಚಿಸಿ ಬರೆಯಿರಿ ಎಂದು ಹಾಸ್ಯ ಚಟಾಕಿ ಹಾರಿಸಿದರು.

Madhu Bangarappa ಇನ್ನು ತೀರ್ಥಹಳ್ಳಿ ತಾಲೂಕಿನಲ್ಲಿ ಕೆಲವೊಂದು ಮನೆಗಳು ಹಾನಿಯಾಗಿದ್ದಾವೆ ಹೊರತು ಬೇರೆ ಅನಾಹುತ ಆಗಿಲ್ಲ. ಹಾಗೇನಾದರು ಆದರೆ ಇನ್ನು ಮುಂದೆ ಜಿಲ್ಲಾಧಿಕಾರಿಗಳು ನೋಡಿಕೊಳ್ಳುತ್ತಾರೆ. ಮನೆ ಹಾನಿಯಾದವರಿಗೆ 5 ಲಕ್ಷ ಹಣ ಸರ್ಕಾರ ಕೊಡುತ್ತದೆ. ಆದರೆ ಅವರಿಗೆ ಹಕ್ಕುಪತ್ರ ಇರಬೇಕು. ಹಕ್ಕುಪತ್ರ ಇಲ್ಲ ಎಂದರೆ 1 ಲಕ್ಷ ಹಣ ಸಿಗುತ್ತದೆ.

ಹಕ್ಕುಪತ್ರ ಇಲ್ಲದವರಿಗೂ ಹಣ ಕೊಡುವ ಕೆಲಸ ಮಾಡಲು ಮನವಿ ಮಾಡುತ್ತೇವೆ. ಇಲ್ಲಿ ಅನಧಿಕೃತ ಮನೆಗಳು ಜಾಸ್ತಿ ಇದ್ದಾವೆ ಕಟ್ಟಿಕೊಂಡವರಿಗೆ ಏನು ಮಾಡಬೇಕು ಎಂದು ಯೋಚನೆ ಮಾಡುತ್ತಿದ್ದೇವೆ ಈ ವಿಚಾರವಾಗಿ ಮುಖ್ಯಮಂತ್ರಿಗಳ ಬಳಿ ಮಾತನಾಡುತ್ತೇನೆ ಎಂದರು.

ಜಿಲ್ಲೆಯಲ್ಲಿ ಇನ್ನು ಮೂರು ದಿನ ಬಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.ಜಿಲ್ಲಾಧಿಕಾರಿ ನೇತೃತ್ವದಲ್ಲಿ ಅಧಿಕಾರಿಗಳು ಎಲ್ಲಾ ಕಡೆ ಹೊಗಲಿದ್ದಾರೆ.

ಶಾಲಾ ಕಟ್ಟಡ ಕೂಡ ಕೆಲವು ಕಡೆ ಬಿದ್ದಿವೆ. ಈಗಾಗಲೇ ಜಿಲ್ಲೆಯಲ್ಲಿ ಮಳೆಯಿಂದ ಮೂರು ಸಾವು ಆಗಿದೆ. ಜನರು ಜವಾಬ್ದಾರಿಯಿಂದ ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕು. ಕಳೆದ ಬಾರಿ ಆಗಸ್ಟ್ ನಲ್ಲಿ ಸ್ವಲ್ಪ ಮಟ್ಟಿಗೆ ಮಳೆ ಆಗಿತ್ತು. ಈ ಬಾರಿ ಸ್ವಲ್ಪ ಜಾಸ್ತಿ ಮಳೆಯಾಗುತ್ತಿದೆ. ಕುಸಿತ ಆಗಿದ್ದನ್ನು ವೀಕ್ಷಣೆ ಮಾಡಿದ್ದೇವೆ. ಸರಿಪಡಿಸುವ ಕೆಲಸವೂ ಆಗುತ್ತಿದೆ ಎಂದರು.

ತೀರ್ಥಹಳ್ಳಿಯಲ್ಲಿ ಬಿಇಒ ಅವರಿಗೆ ವಾಹನ ಇಲ್ಲ ಎಂಬ ಪತ್ರಕರ್ತರ ಪ್ರೆಶ್ನೆಗೆ ಹಲವು ಕಡೆ ಈ ಸಮಸ್ಯೆ ಇದೆ. ಅದನ್ನು ಬಗೆಹರಿಸುವ ಕೆಲಸ ಮಾಡುತ್ತಿದ್ದೇನೆ. ಅದಕ್ಕೂ ಮೊದಲು ಶಾಲೆಗಳಿಗೆ ಶಿಕ್ಷಕರ ಅವಶ್ಯಕತೆ ಇದೆ. ಶಿಕ್ಷಣ ಬೇಕು ಎಂಬ ಕಾರಣಕ್ಕೆ ಅತಿಥಿ ಶಿಕ್ಷಕರನ್ನು ತಂದಿದ್ದೇವೆ.ಅನುದಾನಿತ ಶಾಲೆಗೆ ಶಿಕ್ಷಕರ ಆಯ್ಕೆ ಆಗುತ್ತದೆ.ಹತ್ತು ಸಾವಿರ ಶಿಕ್ಷಕರ ಪಾಠ ಮಾಡಲಿದ್ದಾರೆ.ಶಿಕ್ಷಕರಿಗೆ ಒತ್ತು ಕೊಡುವ ಕೆಲಸ ಆಗುತ್ತಿದೆ.

ಮಕ್ಕಳಿಗೆ ರಸ್ತೆಯಲ್ಲಿ ಪಾಠ ಮಾಡಿದರು ಶಿಕ್ಷಕರ ಅವಶ್ಯಕತೆ ಬಹಳ ಇದೆ ಅದನ್ನು ಸರಿಪಡಿಸುವ ಕೆಲಸ ಆಗುತ್ತಿದೆ.ಇನ್ನು ಪೌಷ್ಟಿಕತೆ ಬೇಕು ಎಂಬ ಕಾರಣಕ್ಕೆ ಮಕ್ಕಳಿಗೆ ಮೊಟ್ಟೆ ಹಾಲು ಕೊಡುವ ಕೆಲಸ ಆಗುತ್ತಿದೆ ಎಂದರು.ಪತ್ರಿಕಾಗೋಷ್ಠಿಗೂ ಮೊದಲು ಬೈಪಾಸ್ ರಸ್ತೆಯಲ್ಲಿ ತಡೆಗೋಡೆ ಕುಸಿದು ಬಿದ್ದ ಸ್ಥಳವನ್ನು ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ತಹಸೀಲ್ದಾರ್ ಜಕ್ಕಣ್ಣ ಗೌಡರ್ ಸೇರಿ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...