Monday, May 4, 2026
Monday, May 4, 2026

Yuva Nidhi Scheme Karnataka ಯುವನಿಧಿ ಯೋಜನೆಗೆ ಅರ್ಹರಿಂದ ಸೇವಾಸಿಂಧು ಪೋರ್ಟಲ್ ಮೂಲಕ ಆನ್ ಲೈನ್ ನೋಂದಣಿಗೆ ಆಹ್ವಾನ

Date:

Yuva Nidhi Scheme Karnataka ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಗೆ ನೋಂದಣೆ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‍ಲೈನ್ ನೋಂದಣಿ ಆಹ್ವಾನಿಸಿದೆ.
2022-23ನೇ ಹಾಗೂ ನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೊಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ರೂ. 3000/- (ಪದವೀಧರ ನಿರುದ್ಯೋಗಿಗಳು) ಹಾಗೂ ರೂ. 1500/- (ಡಿಪ್ಲೋಮಾ ಪಡೆದ ನಿರುದ್ಯೋಗಿಗಳು) ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
Yuva Nidhi Scheme Karnataka ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳು ಗ್ರಾಮ ಒನ್, ಶಿವಮೊಗ್ಗ ಒನ್ ಅಥವಾ ಸೇವಾ ಸಿಂಧು ಪೋರ್ಟಲ್ ಮೂಲಕ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ಸ್ವಯಂ ಘೋಷಣೆ ನೀಡದಿದ್ದಲ್ಲಿ ಆ ತಿಂಗಳು ನೇರ ನಗದು ಖಾತಗೆ ಜಮಾ ಆಗುವುದಿಲ್ಲ. ಆದ್ದರಿಂದ ಫಲಾನುಭವಿಗಳು ತಪ್ಪದೇ ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಸ್ವಯಂ ಘೋಷಣೆ ಮಾಡುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸಾಗರ ರಸ್ತೆ, 2ನೇ ತಿರುವು, ಗುತ್ಯಪ್ಪ ಕಾಲೋನಿ ಶಿವಮೊಗ್ಗ. ದೂ.ಸಂ.:08182-255293 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...