Sunday, August 23, 2026
Sunday, August 23, 2026

Gopal Krishna Belur ಸಾಗರ- ಹೊಸನಗರ ಕ್ಷೇತ್ರದ ಮಳೆಹಾನಿ ಸಮಸ್ಯೆಗೆ ಸ್ಪಂದಿಸಿ ಆನ್ ಲೈನ್ ಮೀಟೀಂಗ್ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಷ

Date:

Gopal Krishna Belur ಸಾಗರ-ಹೊಸನಗರ ಕ್ಷೇತ್ರದಲ್ಲಿ ಮಳೆಹಾನಿ ಕುರಿತು ಬೆಲ್ಜಿಯಂ ದೇಶದಿಂದ ಸಾಗರ ವಿಧಾನಸಭಾ ಕ್ಷೇತ್ರ ಶಾಸಕ ಗೋಪಾಲಕೃಷ್ಣ ಬೇಳೂರು ಆನ್’ಲೈನ್ ಮೀಟಿಂಗ್ ನಡೆಸಿದರು.

ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಮಳೆಹಾನಿ ಪರಿಹಾರ ನೀಡಲು ವಿದೇಶದಲ್ಲಿದ್ದರೂ 24*7 ಜನರ ಮೇಲಿನ ಕಾಳಜಿಗೆ ಜನತೆಯು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಳೆಯಿಂದ ಕ್ಷೇತ್ರದ ಜನತೆಗೆ ಯಾವುದೇ ರೀತಿಯ ತೊಂದರೆ ಆಗಬಾರದೆಂದು ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ ನೀಡಿದರು.

ಹಾನಿಗೊಳಗಾದ ಎಲ್ಲರಿಗೂ ಸೂಕ್ತ ರೀತಿಯ ಪರಿಹಾರ ನೀಡಲಾಗಿದೆ ಎಂದ ಸಾಗರ ತಹಶಿಲ್ದಾರರಾದ ಚಂದ್ರಶೇಖರ ನಾಯ್ಕ ಮತ್ತು ಸಾಗರ ನಗರಸಭಾ ಕಮೀಷನರ್ ಎಚ್.ಕೆ. ನಾಗಪ್ಪ ತಿಳಿಸಿದರು

ಗ್ರಾಮೀಣ ಭಾಗದಲ್ಲಿ ಮಳೆಯಿಂದ ಹಾನಿಗೊಳಗಾದ ಕಡೆ ಹೆಚ್ಚಿನ ಗಮನ ನೀಡಲಾಗಿದ್ದು, ಹಾನಿಗೊಳಗಾದ ಪ್ರತಿಯೊಂದು ಕಡೆ ನಿಗಾ ವಹಿಸಲು ಪಿಡಿಓಗಳಿಗೆ ಹೇಳಲಾಗಿದೆ-ಇಓ ಗುರುಕೃಷ್ಣ ಶೆಣೈ

ಗ್ರಾಮೀಣ ಭಾಗದ ಕುಡಿಯುವ ನೀರು ಮತ್ತು ನೈರ್ನಲ್ಯದ ಬಗ್ಗೆ ಗಮನವಿಟ್ಡು ಜನತೆಗೆ ತೊಂದರೆ ಆಗದಂತೆ ಕೆಲಸ ಮಾಡಲಾಗಿದೆ-ಇಂಜಿನಿಯರ್ ಭರತ್

ರಸ್ತೆಗಳು ಮಳೆಯಿಂದ ಹಾನಿಗೊಳಗಾದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಮತ್ತು ಸಾಗರ ತಾಲ್ಲೂಕು ಕಚೇರಿ ಮೇಲ್ಚಾವಣಿಗೆ ಟೆಂಡರ್ ಕತೆಯುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಲೋಕೋಪಯೋಗಿ ಇಂಜಿನಿಯರ್ ಮಂಜುನಾಥ ಮಾಹಿತಿ ನೀಡಿದರು.

Gopal Krishna Belur ಮಳೆಯಿಂದ ಶಾಲೆಗಳಿಗೆ ಹಾನಿಯಾಗಿದ್ದು, ಅವುಗಳಲ್ಲಿ ಪಾಠ ಮಾಡಲು ಸಾಧ್ಯವಾಗದೇ ಇದ್ದರೆ ಅಂತಹ ಸ್ಥಳದಲ್ಲಿ ಮುಖ್ಯಶಿಕ್ಷಕರು ತೀರ್ಮಾನ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಬಿಇಓ ಪರಶುರಾಮ್ ತಿಳಸಿದರು.

ಮೆಸ್ಕಾಂ ಲೈನ್’ಮನ್ ‘ಗಳ ಪರಿಶ್ರಮಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಮೆಚ್ಚುಗೆ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...