Sunday, December 14, 2025
Sunday, December 14, 2025

Kollur Ghat ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಸುದ್ದಿ.ಕೊಲ್ಲೂರು ಘಾಟಿಯಲ್ಲಿ ಉರುಳಿದ ಶಾಲಾ ಬಸ್

Date:

Kollur Ghat ಕೊಲ್ಲೂರು ಘಾಟಿಯಲ್ಲಿ ಶಿವಮೊಗ್ಗದಿಂದ ಕುಂದಾಪುರಕ್ಕೆ ಹೋಗುವ ಖಾಸಗಿ ಬಸ್ ಒಂದು ರಸ್ತೆಯ ಪಕ್ಕಕ್ಕೆ ಉರುಳಿದೆ. ವಿದ್ಯಾರ್ಥಿಗಳೇ ಹೆಚ್ಚಿದ್ದ ಬಸ್‌ನಲ್ಲಿ ಯಾವುದೇ ಸಾವು ನೋವುಗಳಾಗದಿದ್ದರೂ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ವರದಿಯಾಗಿದೆ.
ಸೋಮವಾರ ಬೆಳಿಗ್ಗೆ ಶಿವಮೊಗ್ಗದಿಂದ ಸಾಗರದ ಮೂಲಕ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಪರಿಣಾಮ ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಬಸ್ ನಲ್ಲಿ ೮೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದು, ಘಾಟಿಯಲ್ಲಿ ಪ್ರಯಾಣಿಸುವಾಗ ಅವಘಡ ಸಂಭವಿಸಿದೆ. ಶಾಲಾ ಮಕ್ಕಳಿಗೆ ಗಾಯಗಳಾಗಿವೆ. ಘಟನೆಗೆ ಬ್ರೇಕ್ ಫೇಲ್ ಎಂದು ಹೇಳಲಾಗುತ್ತಿದೆ. ಆದರೆ ಅಪಘಾತಕ್ಕೆ ಟಯರ್ ಗಳು ಸವದಿದ್ದರೂ ಗಾಡಿ Kollur Ghat ಚಲಾಯಿಸಿದ ಪರಿಣಾಮ ಘಟನೆ ನಡೆದಿರುವುದಾಗಿ ಘಟನೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.
ಟಯರ್ ಸವದಿರುವ ಬಗ್ಗೆ ವಿದ್ಯಾರ್ಥಿಗಳು ಗಮನಕ್ಕೆ ತಂದರೂ ಚಾಲಕ ವಾಹನ ಚಲಾಯಿಸಿದ ಪರಿಣಾಮ ಘಟನೆ ನಡೆದಿದೆ ಎಂದು ಸಾಗರ ತಾಲೂಕಿನ ತುಮರಿ ಭಾಗದ ಸಾಮಾಜಿಕ ಹೋರಾಟಗಾರರೊಬ್ಬರು ಫೇಸ್ ಬುಕ್ ನಲ್ಲಿ ಬರೆದಿದ್ದಾರೆ. ಎರಡು ಮೂರು ತಿಂಗಳಿಂದ ವಾಹನದ ನಿರ್ವಹಣೆ ಸರಿಯಲ್ಲದ ಕಾರಣ ಒಂದೊಂದು ಸಮಸ್ಯೆ ತಲೆದೋರಿತ್ತು. ಇದರ ಮುಂದುವರೆದ ಭಾಗ ಎಂದು ಸಹ ಸಾಮಾಜಿಕ ಜಾಲತಾಣದಲ್ಲಿ ಘಟನೆಯ ಬಗ್ಗೆ ವೈರಲ್ ಮಾಡಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...