Thursday, March 19, 2026
Thursday, March 19, 2026

Kollur Ghat ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಸುದ್ದಿ.ಕೊಲ್ಲೂರು ಘಾಟಿಯಲ್ಲಿ ಉರುಳಿದ ಶಾಲಾ ಬಸ್

Date:

Kollur Ghat ಕೊಲ್ಲೂರು ಘಾಟಿಯಲ್ಲಿ ಶಿವಮೊಗ್ಗದಿಂದ ಕುಂದಾಪುರಕ್ಕೆ ಹೋಗುವ ಖಾಸಗಿ ಬಸ್ ಒಂದು ರಸ್ತೆಯ ಪಕ್ಕಕ್ಕೆ ಉರುಳಿದೆ. ವಿದ್ಯಾರ್ಥಿಗಳೇ ಹೆಚ್ಚಿದ್ದ ಬಸ್‌ನಲ್ಲಿ ಯಾವುದೇ ಸಾವು ನೋವುಗಳಾಗದಿದ್ದರೂ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ವರದಿಯಾಗಿದೆ.
ಸೋಮವಾರ ಬೆಳಿಗ್ಗೆ ಶಿವಮೊಗ್ಗದಿಂದ ಸಾಗರದ ಮೂಲಕ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಪರಿಣಾಮ ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಬಸ್ ನಲ್ಲಿ ೮೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದು, ಘಾಟಿಯಲ್ಲಿ ಪ್ರಯಾಣಿಸುವಾಗ ಅವಘಡ ಸಂಭವಿಸಿದೆ. ಶಾಲಾ ಮಕ್ಕಳಿಗೆ ಗಾಯಗಳಾಗಿವೆ. ಘಟನೆಗೆ ಬ್ರೇಕ್ ಫೇಲ್ ಎಂದು ಹೇಳಲಾಗುತ್ತಿದೆ. ಆದರೆ ಅಪಘಾತಕ್ಕೆ ಟಯರ್ ಗಳು ಸವದಿದ್ದರೂ ಗಾಡಿ Kollur Ghat ಚಲಾಯಿಸಿದ ಪರಿಣಾಮ ಘಟನೆ ನಡೆದಿರುವುದಾಗಿ ಘಟನೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.
ಟಯರ್ ಸವದಿರುವ ಬಗ್ಗೆ ವಿದ್ಯಾರ್ಥಿಗಳು ಗಮನಕ್ಕೆ ತಂದರೂ ಚಾಲಕ ವಾಹನ ಚಲಾಯಿಸಿದ ಪರಿಣಾಮ ಘಟನೆ ನಡೆದಿದೆ ಎಂದು ಸಾಗರ ತಾಲೂಕಿನ ತುಮರಿ ಭಾಗದ ಸಾಮಾಜಿಕ ಹೋರಾಟಗಾರರೊಬ್ಬರು ಫೇಸ್ ಬುಕ್ ನಲ್ಲಿ ಬರೆದಿದ್ದಾರೆ. ಎರಡು ಮೂರು ತಿಂಗಳಿಂದ ವಾಹನದ ನಿರ್ವಹಣೆ ಸರಿಯಲ್ಲದ ಕಾರಣ ಒಂದೊಂದು ಸಮಸ್ಯೆ ತಲೆದೋರಿತ್ತು. ಇದರ ಮುಂದುವರೆದ ಭಾಗ ಎಂದು ಸಹ ಸಾಮಾಜಿಕ ಜಾಲತಾಣದಲ್ಲಿ ಘಟನೆಯ ಬಗ್ಗೆ ವೈರಲ್ ಮಾಡಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...