Monday, May 19, 2025
Monday, May 19, 2025

Minorities Welfare Haj and Waqf Department ಮದರಸಗಳಿಗೆ ಅನುದಾನ ಪಡೆಯಲು ಪ್ರಸ್ತಾವನೆಗಳಿಗೆ ಆಹ್ವಾನ

Date:

Minorities Welfare Haj and Waqf Department 2024-25ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆಯು ರಾಜ್ಯದಲ್ಲಿ ನಡೆಸಲಾಗುತ್ತಿರುವ ಮುಸ್ಲಿಂ ಸಮುದಾಯದ ನೊಂದಾಯಿತ ಮದರಸಗಳ ಆಧುನೀಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಶಿವಮೊಗ್ಗ ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 2 ಮದರಸಗಳನ್ನು ಜಿಲ್ಲಾ ಹಂತದಲ್ಲಿ ಜಿಲ್ಲಾ ಅಧಿಕಾರಿಗಳ ಅನುಮೋದನೆಯೊಂದಿಗೆ ಅಯ್ಕೆ ಮಾಡಲಾಗುತ್ತಿದ್ದು, ಅರ್ಹ ಮದರಸಗಳಿಂದ ಪ್ರಸ್ತಾವನೆ ಆಹ್ವಾನಿಸಿದೆ.
ಸ್ವಂತ ಕಟ್ಟಡವನ್ನು ಹೊಂದಿರುವ ವಕ್ಫ್ ಮದರಸದಲ್ಲಿ ಕನಿಷ್ಠ 10 ಮಕ್ಕಳ ದಾಖಲಾತಿ ಸಂಖ್ಯೆಯಿರಬೇಕು. ಅತಿ ಹೆಚ್ಚು ವಿದ್ಯಾರ್ಥಿಗಳಿರುವ ಹಾಗೂ ಮೂಲಭೂತ ಸೌಕರ್ಯಗಳ ಅತಿ ಅಗತ್ಯವಿರುವ ಮದರಸಗಳನ್ನು ಆಯ್ಕೆ ಮಾಡಲಾಗುವುದು. ಈಗಾಗಲೇ ಇದೇ ಉದ್ದೇಶಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅನುದಾನ ಪಡೆದ ಮದರಸಗಳನ್ನು ಪರಿಗಣಿಸುವುದಿಲ್ಲ. ಅರ್ಹ ಮದರಸಗಳಿಗೆ ಒಂದು ಬಾರಿಗೆ ಗರಿಷ್ಠ ರೂ. 5.00 ಲಕ್ಷಗಳ ಅನುದಾನ ಮಂಜೂರು ಮಾಡಲಾಗುವುದು.
Minorities Welfare Haj and Waqf Department ಆಸಕ್ತ ಮದರಸ ಸಂಸ್ಥೆಗಳು ಅರ್ಜಿ ನಮೂನೆಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜುಲೈ 30ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-220206 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Guarantee scheme ಜನ ಸಾಮಾನ್ಯರ ಬದುಕಿಗೆ ಗ್ಯಾರಂಟಿ ಯೋಜನೆಗಳು ಬೆಳಕಾಗಿವೆ

Guarantee scheme ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ನಾಡಿನ...

Klive Special Article ಭಯೋತ್ಪಾದನೆ‌ ಜಾಗತಿಕ ಜಾಗೃತಿಗೆಸರ್ವಸಮ್ಮತ ಸರ್ವಪಕ್ಷ‌ ನಿಯೋಗ.

Klive Special Article ಪೆಹಲ್ಗಾಂ ದುರಂತದ ನಂತರ ನಡೆದ ಬೆಳವಣಿಗೆಗಳಲ್ಲಿಮೂರು ಸಂಗತಿಗಳು ಸುದ್ದಿಮನೆಯನ್ನ...

Rajesh Keelambi “ಶಾಖಾಹಾರಿ” ನಿರ್ಮಾಪಕ ರಾಜೇಶ್ ಕೀಳಂಬಿ‌ ಅವರಿಗೆಡಾ.ಪುನೀತ್ ರಾಜ್ ಕುಮಾರ್ ಚೊಚ್ಚಲ ನಿರ್ಮಾಪಕ  ಪ್ರಶಸ್ತಿ

Rajesh Keelambi ಶಾಖಾಹಾರಿ ಚಿತ್ರದ ನಿರ್ಮಾಪಕಕೀಳಂಬಿ‌ ಮೀಡಿಯಾ ಲ್ಯಾಬ್ ಸಂಸ್ಥೆಯ ಎಂ.ಡಿ....

Shimog News ಹಿರಿಯೂರು ಕೃಷ್ಣಮೂರ್ತಿ ಸ್ಮರಣೀಯ ವ್ಯಕ್ತಿ,- ದತ್ತಾತ್ರೇಯ ಹೊಸಬಾಳೆ

Shimog News ತಾ.17-5-25 ರ ಶನಿವಾರ ಸಂಜೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ...