Tuesday, February 3, 2026
Tuesday, February 3, 2026

Engineer jumps off Mumbai’s Atal Setu ಮುಂಬೈ ಅಟಲ್ ಸೇತುವಿನಿಂದ ಜಿಗಿದು ಇಂಜಿನಿಯರ್ ಆತ್ಮಹತ್ಯೆ. ಸಿಸಿಟಿವಿಯಲ್ಲಿ ದೃಶ್ಯ ಸೆರೆ

Date:

Engineer jumps off Mumbai’s Atal Setu 38 ವರ್ಷದ ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.
ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ.

ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

Engineer jumps off Mumbai’s Atal Setu ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ.

ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...