Saturday, March 28, 2026
Saturday, March 28, 2026

Engineer jumps off Mumbai’s Atal Setu ಮುಂಬೈ ಅಟಲ್ ಸೇತುವಿನಿಂದ ಜಿಗಿದು ಇಂಜಿನಿಯರ್ ಆತ್ಮಹತ್ಯೆ. ಸಿಸಿಟಿವಿಯಲ್ಲಿ ದೃಶ್ಯ ಸೆರೆ

Date:

Engineer jumps off Mumbai’s Atal Setu 38 ವರ್ಷದ ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.
ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ.

ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

Engineer jumps off Mumbai’s Atal Setu ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ.

ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ...

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...