Tuesday, February 3, 2026
Tuesday, February 3, 2026

D.K. Shivakumar ಇಂಜಿನಿಯರ್ ಗಳನ್ನ ನಿಂದಿಸಿದ ಆರ್.ಅಶೋಕ್ ಕ್ಷಮೆ ಕೇಳಲಿ-ಡಿಸಿಎಂ ಡಿ.ಕೆ.ಶಿವಕುಮಾರ್ ಆಗ್ರಹ

Date:

D.K. Shivakumar ರಾಜ್ಯದ ಎಂಜಿನಿಯರ್‌ಗಳನ್ನು ಮನೆಹಾಳರು ಎಂದು ವಿಧಾನಸಭೆಯಲ್ಲಿ ನಿಂದಿಸಿರುವ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಅವರು ತಕ್ಷಣ ಎಂಜಿನಿಯರ್‌ಗಳ ಕ್ಷಮೆ ಕೇಳಬೇಕು.

ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಕರ್ನಾಟಕ ಎಂಜಿನಿಯರ್‌ಗಳ ಸಂಘದ ಗೌರವ ಅಧ್ಯಕ್ಷ ದೇವರಾಜ್ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಡಿ.ಕೆ. ಶಿವಕುಮಾರ್‌ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ, ತಮ್ಮ ಹೇಳಿಕೆಯನ್ನು ಅಶೋಕ ಅವರು ಹಿಂತೆಗೆದುಕೊಳ್ಳುವಂತೆ ಒತ್ತಡ ತರಬೇಕೆಂದು ಮನವಿ ಮಾಡಿದರು.

D.K. Shivakumar ಅಣೆಕಟ್ಟೆಗಳು, ವಿದ್ಯುತ್ ಯೋಜನೆಗಳು, ಬೃಹತ್ ಕಟ್ಟಡಗಳು, ಐಟಿಬಿಟಿ ಕ್ಷೇತ್ರ ಸೇರಿದಂತೆ ನಾಡಿನ ಅಭಿವೃದ್ಧಿಗೆ ಅನೇಕ ಕ್ಷೇತ್ರಗಳಲ್ಲಿ ಎಂಜಿನಿಯರ್‌ಗಳು ಸಾಕಷ್ಟು ಕೊಡುಗೆ ನೀಡಿದ್ದಾರೆ. ರಾಜ್ಯ ಮತ್ತು ದೇಶದ ಪ್ರಗತಿಯ ರೂವಾರಿಗಳನ್ನು ಮನೆಹಾಳರು ಎಂದು ಕರೆದಿರುವುದು ಸರಿಯಲ್ಲ ಎಂದರು.

ಅಶೋಕ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಡಿ.ಕೆ. ಶಿವಕುಮಾರ್‌, ಎಂಜಿನಿಯರ್‌ಗಳನ್ನು ಅವಹೇಳನ ಮಾಡಿರುವ ಹೇಳಿಕೆಯನ್ನು ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...