Wednesday, October 2, 2024
Wednesday, October 2, 2024

Actor Darshan ಮನೆಯೂಟಕ್ಕೆ ಮನವಿ ಮಾಡಿದ್ದ ದರ್ಶನ್ ಪರ ಅರ್ಜಿಗೆ ಕೋರ್ಟ್ ನಕಾರ

Date:

Actor Darshan ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ್ ಅವರು ಮನೆ ಊಟ, ಹಾಸಿಗೆ, ಬಟ್ಟೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು 24ನೇ ಎಸಿಎಂಎಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಈಗ ದರ್ಶನ್​ ಅವರಿಗೆ ಜೈಲಿನ ಊಟವೇ ಗತಿ ಆಗಿದೆ.

ಜೈಲೂಟದಿಂದ ಅಜೀರ್ಣ, ಅತಿಸಾರ ಆಗಿದೆ. ಇದರಿಂದ ದೇಹದ ತೂಕ ಕಡಿಮೆಯಾಗುತ್ತಿದೆ ಎಂಬ ಕಾರಣ ನೀಡಿ ಮನೆಯ ಊಟ ತರಿಸಲು ಅನುಮತಿ ಕೋರಿ ದರ್ಶನ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು, ಕೊಲೆ ಆರೋಪಿಗಳಿಗೆ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ. ಜೈಲು ನಿಯಮಾವಳಿ 728ರಲ್ಲಿ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದ್ದಾರೆ.

Actor Darshan ಜೈಲೂಟದಿಂದ ದರ್ಶನ್​ಗೆ ಯಾವುದೇ ಸಮಸ್ಯೆ ಆಗಿಲ್ಲ. ಶೂಟಿಂಗ್ ವೇಳೆ ಆದ ಗಾಯದ ನೋವಿನ ಬಗ್ಗೆ ಮಾತ್ರ ವೈದ್ಯರು ಸಲಹೆ ನೀಡಿದ್ದಾರೆ. ಜೈಲಿನ ನಿಯಮಾವಳಿಯಲ್ಲಿ ಮನೆಯೂಟಕ್ಕೆ ಅವಕಾಶವಿಲ್ಲ ಎಂದು ಪೊಲೀಸರ ಪರ ವಿಶೇಷ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...