Friday, March 20, 2026
Friday, March 20, 2026

Dr. Babu Jagjivan Ram Leather Industries Development  ಕೌಶಲ್ಯ ಅಭಿವೃದ್ದಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

Date:

Dr. Babu Jagjivan Ram Leather Industries Development  ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ರಾಜ್ಯದ ಪಾರಂಪರಿಕ ಚರ್ಮಗಾರಿಕೆಯಲ್ಲಿ ತೊಡಗಿರುವ ಕುಟುಂಬಗಳ ಯುವ ಜನರಿಗೆ (ಪರಿಶಿಷ್ಟ ಜಾತಿಯಲಿ ಬರುವ ಮಾದಿಗ, ಸಮಗಾರ, ಡೋರ, ಆದಿಜಾಂಬವ, ಮಚಗಾರ, ಮೋಚಿ ಹಾಗೂ ಇತರೆ ಚರ್ಮೋಗಾರಿಕೆಗೆ ಒಳಪಡುವ ಸಮುದಾಯಗಳಿಗೆ) ಪ್ರಸ್ತುತ ಚರ್ಮ ಉದ್ಯಮದಲ್ಲಿ ಚಾಲ್ತಿಯಲ್ಲಿರುವ ಹೊಸ ತಂತ್ರಜ್ಞಾನಗಳು, ವಿನ್ಯಾಸಗಳು ಹಾಗೂ ಮಾರುಕಟ್ಟೆಯ ಬೇಡಿಕೆಗಳನ್ನು ಪರಿಚಯಿಸಲು ಚರ್ಮ ಆಧಾರಿತ ಕೈಗಾರಿಕೆಗಳಲ್ಲಿ ಮುಂಚೂಣಿಯಲ್ಲಿರುವ ಆಗ್ರಾ, ಉತ್ತರ ಪ್ರದೇಶ ಹಾಗೂ ಕೊಲ್ಕತ್ತಾ, ಪಶ್ಚಿಮ ಬಂಗಾಳದ ರಾಜ್ಯಗಳಲ್ಲಿರುವ ಮೆ|| ಸೆಂಟ್ರಲ್ ಫುಟ್‌ವೇರ್ ಟ್ರೆöÊನಿಂಗ್ ಇನ್‌ಸ್ಟಿಟ್ಯೂಟ್/ಸೆಂಟರ್ ಇಲ್ಲಿಗೆ 60 ದಿನಗಳ ವಸತಿ ಸಹಿತ ಕೌಶಲ್ಯ ಅಭಿವೃದ್ಧಿ ತರಬೇತಿ ‘ಫುಟ್‌ವೇರ್ ಡಿಸೈನಿಂಗ್ ಆಂಡ್ ಪ್ರೊಡಕ್ಷನ್” ಪಡೆಯಲು ಕಳುಹಿಸಿಕೊಡಲಾಗುತ್ತಿದ್ದು, 10ನೇ ತರಗತಿ ಪಾಸಾಗಿರುವ 18 ರಿಂದ 40 ವರ್ಷ ವಯೋಮಿತಿಯುಳ್ಳ ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಯ್ಕೆಯಾದ ಅರ್ಹ ಅಭ್ಯರ್ಥಿಗಳ ಪ್ರಯಾಣ ವೆಚ್ಚ, ಉಟೋಪಚಾರ, ವಸತಿ ವ್ಯವಸ್ಥೆಯನ್ನು ನಿಗಮದಿಂದ ಕಲ್ಪಿಸಲಾಗುವುದು, ತರಬೇತಿ ಅವಧಿಯಲ್ಲಿ ದಿನಕ್ಕೆ 200/- ರೂ.ನಂತೆ ರೂ. 12,000/-ಪಾವತಿಸಲಾಗುವುದು. ಮೊದಲನೆ ಹಂತದಲ್ಲಿ ಆಗ್ರಾ, ಉತ್ತರ ಪ್ರದೇಶದ ಮೆ|| ಸೆಂಟ್ರಲ್ ಫುಟ್‌ವೇರ್ ಟ್ರೆöÊನಿಂಗ್ ಇನ್‌ಸ್ಟಿಟ್ಯೂಟ್/ಸೆಂಟರ್‌ನಲ್ಲಿ ಆಗಸ್ಟ್ 19 ರಿಂದ ಅಕ್ಟೋಬರ್ 18ರವರೆಗೆ ನಡೆಯುವ ತರಬೇತಿಗೆ ನಿಯೋಜಿಸಲಾಗುವುದು.
Dr. Babu Jagjivan Ram Leather Industries Development  ಆಸಕ್ತರು ತಮ್ಮ ವೈಯಕ್ತಿಕ ವಿವರ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್‌ಪಾಸ್ ಪುಸ್ತಕದ ಜೇರಾಕ್ಸ್ ಪ್ರತಿ, ಪಾಸ್‌ಪೋರ್ಟ್ ಸೈಜ್ 5 ಪೋಟೋಗಳನ್ನು ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ, ನಂ. 32, ಲಿಡ್ಕರ್ ಭವನ, ಮಿಲ್ಲರ್ಸ್ ಟ್ಯಾಂಕ್ ಬಂಡ್ ಏರಿಯಾ, ವಸಂತನಗರ, ಬೆಂಗಳೂರು-560052 ಇಲ್ಲಿಗೆ ಜುಲೈ 31ರೊಳಗಾಗಿ ಸಲ್ಲಿಸುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಲಿಡ್ಕರ್, ನೆಹರು ರಸ್ತೆ, ಶಿವಮೊಗ್ಗ ದೂ.ಸಂ.: 9449181136 ಇವರನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...