Monday, February 2, 2026
Monday, February 2, 2026

Department of Horticulture ಹವಾಮಾನಾಧಾರಿತ ಬೆಳೆವಿಮೆ ಯೋಜನೆ ನೋಂದಾವಣೆಗೆ ಜುಲೈ 31 ಅಂತಿಮ ದಿನಾಂಕ- ಗುರುದತ್ತ ಹೆಗಡೆ

Date:

Department of Horticulture ತೋಟಗಾರಿಕೆ ಇಲಾಖೆಯಿಂದ ಮರು ವಿನ್ಯಾಸಗೊಳಿಸಲಾದ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ ವಿಮೆ ನೋಂದಣಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳು ಮತ್ತು ವಿಮಾ ಕಂಪನಿಗಳ ಪ್ರತಿನಿಧಿಗಳೊಂದಿಗೆ ಜುಲೈ 23 ರಂದು ಸಭೆಯನ್ನು ನಡೆಸಿದರು.

ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ ಬರುವ ಜಿಲ್ಲೆಯ ಬೆಳೆಗಳಾದ ಅಡಿಕೆ, ಮಾವು, ಕಾಳು ಮೆಣಸು ಮತ್ತು ಶುಂಠಿ ಬೆಳೆಯನ್ನು ಬೆಳೆದಂತಹ, ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಸಂರಕ್ಷಣೆ ತಂತ್ರಾಂಶದಲ್ಲಿ ನೊಂದಾಯಿಸಲು ಜುಲೈ 31 ರವರೆಗೆ ಅವಕಾಶ ಕಲ್ಪಿಸಲಾಗಿರುತ್ತದೆ.

ವಿಮೆ ನೊಂದಣಿ ಮಾಡುವ ಸಂದರ್ಭದಲ್ಲಿ ರೈತರು ಬೆಳೆದಿರುವಂತಹ ನೊಂದಾಯಿತ ಬೆಳೆಗಳು ಸಂರಕ್ಷಣೆ ತಂತ್ರಾಂಶದಲ್ಲಿ ಕಂಡು ಬಾರದ ಹಿನ್ನಲೆಯಲ್ಲಿ ಹಲವಾರು ರೈತರು ಹವಾಮಾನಾಧಾರಿತ ಬೆಳೆ ಬೆಳೆ ವಿಮೆ ಯೋಜನೆಯಡಿ ನೊಂದಾಯಿಸಲು ಸಾಧ್ಯವಾಗುತ್ತಿಲ್ಲ.

Department of Horticulture ಕಳೆದ ಎರಡು ವರ್ಷಗಳಲ್ಲಿ ಬೆಳೆ ಸಮೀಕ್ಷೆ ಪ್ರಕಾರ ನೊಂದಾಯಿತ ಬೆಳೆ ಬಂದರೆ ಅಥವಾ ಕನಿಷ್ಟ ಒಂದು ವರ್ಷದಲ್ಲಿಯಾದರು ಬೆಳೆ ಸಮೀಕ್ಷೆಯಲ್ಲಿ ನೊಂದಾಯಿತ ಬೆಳೆ ಕಂಡು ಬಂದರೆ ಅಂತಹ ಪ್ರಕರಣಗಳನ್ನು ಪರಿಗಣಿಸಿ ಸಂರಕ್ಷಣೆ ತಂತ್ರಾಂಶದಲ್ಲಿ ನೋಂದಣಿ ಮಾಡಲು ಜಿಲ್ಲಾಧಿಕಾರಿಗಳು ಆದೇಶಿಸುತ್ತಾ, ಜಿಲ್ಲೆಯ ರೈತರು ಸದರಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...