Wednesday, December 17, 2025
Wednesday, December 17, 2025

Bahujana Samaj Party ಪರಿಶಿಷ್ಟ ಜಾತಿ/ವರ್ಗಗಳಿಗೆ ಮೀಸಲಿದ್ದ ಹಣವನ್ನ ಇತರೆ ಕಾರ್ಯಕ್ಕೆ ಬಳಕೆ ವಿರುದ್ಧ ಬಿಎಸ್ ಪಿ ಪ್ರತಿಭಟನೆ

Date:

Bahujana Samaj Party ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನರಿಗೆ ಮೀಸಲಿಟ್ಟ ಹಣವನ್ನು ಇತರೆ ಕಾರ್ಯಕ್ಕೆ ಬಳಸಿಕೊಳ್ಳುವುದನ್ನು ವಿರೋಧಿಸಿ ಬಹುಜನ ಸಮಾಜ ಪಾರ್ಟಿ (ಬಿಎಸ್‌ಪಿ) ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗಕ್ಕೆ ಎಸ್.ಸಿ.,ಎಸ್.ಪಿ., ಮತ್ತು ಟಿ.ಎಸ್.ಪಿ. ಮೀಸಲು ಹಣವನ್ನು ಜನಾಂಗದ ಪ್ರಗತಿಗೆ ಯಾವುದೇ ಸರ್ಕಾರಗಳು ಬಳಸದೇ ಬೇರೆ ಕೆಲಸಗಳಿಗೆ ಉಪಯೋಗಿಸಿಕೊಳ್ಳುತ್ತಿದ್ದಾರೆ. ಇದರಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಹೊರತಾಗಿಲ್ಲ, ಅದರಲ್ಲೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಪರಿಶಿಷ್ಟರ ಅಭಿವೃದ್ಧಿಗೆಂದು ಮೀಸಲಿಟ್ಟ ಕೋಟ್ಯಾಂತರ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ ಎಂದು ದೂರಿದರು.

10 ವರ್ಷಗಳಲ್ಲಿ ಎರಡು ಲಕ್ಷ 56 ಸಾವಿರ ಕೋಟಿ ಹಣವನ್ನು ಇತರೆ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ. ಈ ಹಣದಿಂದ ಪರಿಶಿಷ್ಟರ ವಿದ್ಯಾರ್ಥಿಗಳ ಶಿಕ್ಷಣಕ್ಕೆ, ಬಡವರ ಮನೆಗಳಿಗೆ, ನಿರುದ್ಯೋಗಿಗಳಿಗೆ ನೆರವು, ಭೂ ರಹಿತ ಕುಟುಂಬಕ್ಕೆ ಜಮೀನು ನೀಡಬಹುದಿತ್ತು. ಆರೋಗ್ಯಕ್ಕೆ ಸಂಬಂಧಿಸಿದಂತೆ ಉತ್ತಮ ಚಿಕಿತ್ಸೆ ಕೊಡಬಹುದಿತ್ತು.

Bahujana Samaj Party ಆದರೆ ಮೂರು ಸರ್ಕಾರಗಳು ಈ ಕೆಲಸ ಮಾಡದೇ ದ್ರೋಹ ಬಗೆದಿವೆ ಎಂದು ದೂರಿದರು.
ಜಾತ್ಯತೀತ, ಮನುವಾದಿ, ಜಾತಿವಾದಿ ಇವೆಲ್ಲವೂ ಒಂದೇ ಆಗಿವೆ. ಈ ಮೂರು ಪಕ್ಷಗಳಿಂದ ಬಹುಜನರ ಉದ್ದಾರ ಸಾಧ್ಯವಿಲ್ಲ. ಬಿಜೆಪಿ ಹುಲ್ಲಿನ ಮೇಲಿನ ಹಾವು ಇದ್ದಂತೆ. ಕಾಂಗ್ರೆಸ್ ಹುಲ್ಲಿನ ಒಳಗಿರುವ ಹಾವಿದ್ದಂತೆ, ಹಾಗಾಗಿ ಇನ್ನಾದರೂ ಪರಿಶಿಷ್ಟರ ಉದ್ದಾರಕ್ಕಾಗಿ ಎಲ್ಲಾ ಸರ್ಕಾರಗಳು ಪ್ರಯತ್ನಿಸಬೇಕು. ಮತ್ತು ಪರಿಶಿಷ್ಟರ ಕಲ್ಯಾಣಕ್ಕಾಗಿಯೇ ಮೀಸಲಿಟ್ಟ ಹಣವನ್ನು ಬಳಸಬೇಕು ಎಂದರು.

ಪ್ರತಿಭಟನೆಯಲ್ಲಿ ಬಿ.ಎಸ್.ಪಿ. ಜಿಲ್ಲಾಧ್ಯಕ್ಷ ಎ.ಡಿ.ಶಿವಪ್ಪ, ಪ್ರಮುಖರಾದ ಹೆಚ್.ಎಂ. ಶ್ರೀನಿವಾಸ್, ಎಂ. ಕೃಷ್ಣಪ್ಪ, ಎ.ಡಿ. ಶಿವಮೂರ್ತಿ, ರಾಜಪ್ಪ, ಗುತ್ಯಪ್ಪ, ಲಕ್ಷ್ಮೀಪತಿ, ಲೋಕೇಶ್, ಅಫ್ಸರ್ ಪಾಶಾ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...