Monday, May 25, 2026
Monday, May 25, 2026

ANV Vidhyalaya Matriculation School ಹೃದಯಾಘಾತ ಅನುಭಕ್ಕೆ ಬಂದಾಕ್ಷಣ ಬಸ್ ನಿಲ್ಲಿಸಿ ಶಾಲಾಮಕ್ಕಳನ್ನ ಕಾಪಾಡಿ ಜೀವ ತೊರೆದ ಚಾಲಕ

Date:

ANV Vidhyalaya Matriculation School ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯಲ್ಲಿ 49 ವರ್ಷದ ಸ್ಕೂಲ್ ವ್ಯಾನ್ ಚಾಲಕನೊಬ್ಬ ವಾಹನವನ್ನು ರಸ್ತೆ ಬದಿಯಲ್ಲಿ ಸುರಕ್ಷಿತವಾಗಿ ನಿಲ್ಲಿಸುವ ಮೂಲಕ, ಸುಮಾರು 20 ವಿದ್ಯಾರ್ಥಿಗಳ ಪ್ರಾಣ ಉಳಿಸಿದ್ದಾರೆ. ಇದಾದ ಕೆಲವೇ ಕ್ಷಣಗಳಲ್ಲಿ ಚಾಲಕ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿಗೆ ಅವರು ಬರುವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು.
ಚಾಲಕ ಸೆಮಲಯ್ಯಪ್ಪನ್ ಶಾಲಾ ಮಕ್ಕಳೊಂದಿಗೆ ಚಾಲಕನ ಸೀಟಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕುಳಿತಿರುವ ಚಿತ್ರವು
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಬಳಕೆದಾರರು ಚಾಲಕನ ಕೆಚ್ಚೆದೆಯ ಕೃತ್ಯಕ್ಕೆ ಸೆಲ್ಯೂಟ್ ಮಾಡಿದ್ದಾರೆ.
ಜುಲೈ 24ರ ಬುಧವಾರದಂದು ಈ ಘಟನೆ ನಡೆದಿದ್ದು, ವೆಲ್ಲಕೋಯಿಲ್‌ನ ಎಎನ್‌ವಿ ಮೆಟ್ರಿಕ್ ಶಾಲೆಯಿಂದ ವಿದ್ಯಾರ್ಥಿಗಳನ್ನು ಅವರ ಮನೆಗೆ ಬಿಡಲು ಸೆಮಲಯ್ಯಪ್ಪನ್ ಕರೆದುಕೊಂಡು ಹೋಗಿದ್ದರು. ಎದೆನೋವು ಕಾಣಿಸಿಕೊಂಡಿದ್ದು, ಕಷ್ಟಪಟ್ಟು ಸುರಕ್ಷಿತವಾಗಿ ರಸ್ತೆಬದಿಯಲ್ಲಿ ವಾಹನ ನಿಲ್ಲಿಸಿದ್ದಾರೆ.
ANV Vidhyalaya Matriculation School ವಿಶೇಷವೆಂದರೆ, ಅವರ ಪತ್ನಿ ಕೂಡ ಅದೇ ಶಾಲೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದು, ಅವರು ಕುಸಿದು ಬಿದ್ದಾಗ ವ್ಯಾನ್‌ನಲ್ಲಿದ್ದರು. ಸಾವಿನ ಅಂಚಿನಲ್ಲಿರುವ ಮಕ್ಕಳ ಪ್ರಾಣ ಉಳಿಸಿದ ಚಾಲಕನ ಸಾಹಸಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೇರಿದಂತೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
“ಅವರ ಜೀವಕ್ಕೆ ಅಪಾಯವಿದ್ದರೂ ಶಾಲೆಯ ವಿದ್ಯಾರ್ಥಿಗಳ ಅಮೂಲ್ಯ ಜೀವವನ್ನು ಉಳಿಸಿದರು. ಅವರ ಕರ್ತವ್ಯ ಪ್ರಜ್ಞೆ ಮತ್ತು ಸ್ವಯಂ ತ್ಯಾಗಕ್ಕಾಗಿ ನಾವು ಅವರನ್ನು ಅಭಿನಂದಿಸುತ್ತೇವೆ. ಅವರು ತಮ್ಮ ಮಾನವೀಯ ಕಾರ್ಯದ ಮೂಲಕ ಬದುಕುವುದನ್ನು ಮುಂದುವರಿಸುತ್ತಾರೆ” ಎಂದು ಸ್ಟಾಲಿನ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸೇಮಲಯ್ಯಪ್ಪನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಿಎಂ ಸ್ಟಾಲಿನ್ ಘೋಷಿಸಿದ್ದಾರೆ. ಡಿಎಂಕೆ ಸಚಿವ ಎಂಪಿ ಸಾಮಿನಾಥನ್ ಮೃತ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಿದರು. ಶುಕ್ರವಾರ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವ್ಯಾನ್ ಚಾಲಕನಿಗೆ ಗೌರವ ಸಲ್ಲಿಸಿದರು. ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಕುಟುಂಬಸ್ಥರನ್ನು ಭೇಟಿ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...