Thursday, February 5, 2026
Thursday, February 5, 2026

Central Budget  ನೀತಿ ಆಯೋಗ ಸಭೆಗೆ ಕರ್ನಾಟಕ ಸೇರಿ 7 ರಾಜ್ಯಗಳ ಬಹಿಷ್ಕಾರ

Date:

Central Budget  ಕೇಂದ್ರ ಬಜೆಟ್‌ನಲ್ಲಿ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿ ಇಂದು (ಜು.27) ನಡೆಯಲಿರುವ ನೀತಿ ಆಯೋಗದ ಸಭೆಗೆ ಕರ್ನಾಟಕ ಸಹಿತ ಏಳು ರಾಜ್ಯಗಳು ಬಹಿಷ್ಕಾರ ಹಾಕಿವೆ.
ಕರ್ನಾಟಕದ ಮಖ್ಯಮಂತ್ರಿ ಸಿದ್ದರಾಮಯ್ಯ, ಹಿಮಾಚಲ ಪ್ರದೇಶದ ಸುಖವಿಂದರ್ ಸಿಂಗ್ ಸುಖು, ತೆಲಂಗಾಣದ ಎ. ರೇವಂತ್ ರೆಡ್ಡಿ, ತಮಿಳುನಾಡಿನ ಎಂ.ಕೆ ಸ್ಟಾಲಿನ್, ಕೇರಳದ ಪಿಣರಾಯಿ ವಿಜಯನ್ ಮತ್ತು ಪಂಜಾಬ್‌ನ ಮುಖ್ಯಮಂತ್ರಿ ಭಗವಂತ್ ಮಾನ್ ಸಭೆಗೆ ಹಾಜರಾಗುವುದಿಲ್ಲ ಎಂದು ತಿಳಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನದಲ್ಲಿರುವ ಕಾರಣ ಅವರು ಸಭೆಗೆ ಹಾಜರಾಗುವುದು ಅಸಾಧ್ಯವಾಗಿದೆ. ಆದರೆ, ದೆಹಲಿ ಸರ್ಕಾರ ಕೂಡ ಸಭೆಯನ್ನು ಬಹಿಷ್ಕರಿಸಿದೆ.
‘ವಿಕಸಿತ ಭಾರತ @ 2047’ ಎಂಬುವುದು ಈ ವರ್ಷದ ನೀತಿ ಆಯೋಗದ ಥೀಮ್ ಆಗಿದೆ. ಕೇಂದ್ರ ಸರ್ಕಾರ ‘ಮೇಕಿಂಗ್ ಇಂಡಿಯಾ’ಕ್ಕೆ ಹೆಚ್ಚು ಒತ್ತು ಕೊಡುವ ಗುರಿ ಹೊಂದಿದೆ.

ಮಮತಾ, ಸೊರೇನ್ ಭಾಗಿ?:

Central Budget  ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡು ಬಜೆಟ್‌ನಲ್ಲಿ ತಾರತಮ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮುಂದೆ ಪ್ರತಿಭಟನೆ ವ್ಯಕ್ತಪಡಿಸಲಿದ್ದಾರೆ ಎಂದು ಹೇಳಲಾಗಿದೆ. ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಮಮತಾ ಬ್ಯಾನರ್ಜಿ ಗುರುವಾರವೇ ದೆಹಲಿಗೆ ತೆರಳಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಅವರು ಪ್ರಯಾಣ ರದ್ದುಗೊಳಿಸಿದ್ದಾರೆ. ಹಾಗಾಗಿ, ಸಭೆಯಲ್ಲಿ ಭಾಗಿಯಾಗುತ್ತಾರೋ, ಇಲ್ಲವೋ ಎಂಬುವುದು ಖಚಿತವಾಗಿಲ್ಲ.

ನೀತಿ ಆಯೋಗ ರದ್ದತಿಗೆ ಮಮತಾ ಬ್ಯಾನರ್ಜಿ ಆಗ್ರಹ:

ನೀತಿ ಆಯೋಗ ರದ್ದುಪಡಿಸಿ ಈ ಹಿಂದಿನ ಯೋಜನಾ ಆಯೋಗವನ್ನು ಮರುಸ್ಥಾಪಿಸಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ. ನೀತಿ ಆಯೋಗ ಆಧಾರರಹಿತವಾಗಿದೆ. ಅದು ಕೇವಲ ಸಭೆಗಳನ್ನು ನಡೆಸುವುದಕ್ಕಷ್ಟೇ ಸೀಮಿತವಾಗಿದೆ ಎಂದು ದೂರಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...