Sunday, December 14, 2025
Sunday, December 14, 2025

Bannerghatta Fortis Hospital ಹೆತ್ತಮಗನೇ ತನ್ನ ಯಕೃತ್ ಭಾಗ ಧಾನಮಾಡಿ ತಾಯಿಯ ಜೀವವುಳಿಸಿದ!

Date:

Bannerghatta Fortis Hospital ಯಕೃತ್ ಕ್ಯಾನ್ಸರ್ಗೆ ಒಳಗಾಗಿದ್ದ 52 ವರ್ಷದ ತನ್ನ ತಾಯಿಗೆ ಸ್ವತಃ ಮಗನೇ ಯಕೃತ್ ಭಾಗವನ್ನು ದಾನ ಮಾಡುವ ಮೂಲಕ ಮಹಿಳೆಗೆ ಯಶಸ್ವಿಯಾಗಿ ಯಕೃತ್ ಕಸಿ ನಡೆಸಲಾಗಿದೆ.

ಬನ್ನೇರುಘಟ್ಟ ಫೋರ್ಟಿಸ್ ಆಸ್ಪತ್ರೆಯ ಯಕೃತ್ತಿನ ಕಸಿ ಶಸ್ತ್ರಚಿಕಿತ್ಸಕರಾದ ಡಾ.ಕಿಶೋರ್ ಜಿ.ಎಸ್.ಬಿ. ಮತ್ತು ಡಾ ಪಿಯೂಷ್ ಸಿನ್ಹಾ ಹಾಗೂ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಬಿ.ಎಸ್. ರವೀಂದ್ರ ಅವರ ತಂಡ ಯಶಸ್ವಿಯಾಗಿ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಫೋರ್ಟಿಸ್ ಆಸ್ಪತ್ರೆಯ ಲಿವರ್ ಟ್ರಾನ್ಸ್ಪ್ಲಾಂಟ್ ಸರ್ಜನ್ ಡಾ. ಕಿಶೋರ್ ಜಿಎಸ್ಬಿ, ಮತ್ತು ಡಾ. ಪಿಯೂಷ್ ಸಿನ್ಹಾ, 2021 ರಲ್ಲಿ 52 ವರ್ಷದ ಲೀಲಾ ಎಂಬುವವರು ಕಾಮಾಲೆ ಕಾಯಿಲೆಗೆ ತುತ್ತಾದರು. ಇದರ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಾದ ಬಳಿಕ ಅವರಿಗೆ ಲಿವರ್ ಸಿರೋಸಿಸ್ ಇರುವುದು ಪತ್ತೆಯಾಯಿತು. ಬಳಿಕ ಅವರು ಫೋರ್ಟಿಸ್ ಆಸ್ಪತ್ರೆಗೆ ದಾಖಲಾದರು.

Bannerghatta Fortis Hospital ದೀರ್ಘಕಾಲದಿಂದ ಯಕೃತ್ನ ಕಾಯಿಲೆ ಇರುವ ಕಾರಣ ಅವರ ಯಕೃತ್ನಲ್ಲಿ ದ್ರವದ ಶೇಖರಣೆಯಾಗಿ ಯಕೃತ್ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಇದರಿಂದ ಅವರ ಜೀವನ ಶೈಲಿಯ ಮೇಲೆ ತೀವ್ರ ಪರಿಣಾಮ ಉಂಟು ಮಾಡುತ್ತಿತ್ತು. ಅವರನ್ನು ಮತ್ತಷ್ಟು ತಪಾಸಣೆಗೆ ಒಳಪಡಿಸಿದ ಬಳಿಕ ಪಿತ್ತರಸ ನಾಳದಲ್ಲಿ ಕಲ್ಲು ಇರುವುದು ಪತ್ತೆಯಾಯಿತು. ಗ್ಯಾಸ್ಟ್ರೋ ತಂಡವು ಈ ಕಲ್ಲು ತೆಗೆಯುವ ಶಸ್ತ್ರಚಿಕಿತ್ಸೆ ವೇಳೆ ಆಕೆಗೆ ಯಕೃತ್ನ ಕ್ಯಾನ್ಸರ್ ಪ್ರಾರಂಭಿಕ ಹಂತದಲ್ಲಿರುವುದು ಸಹ ತಿಳಿದುಬಂತು.

ಹೀಗಾಗಿ ಆಕೆಗೆ ಲಿವರ್ ಸಿರೋಸಿಸ್ ಮತ್ತು ಯಕೃತ್ತಿನ ಕ್ಯಾನ್ಸರ್ಗೆ ಕೂಡಲೇ ಯಕೃತ್ ಕಸಿ ಅಗತ್ಯತೆ ಬಿತ್ತು. ಸ್ವತಃ 31 ವರ್ಷದ ಮಗನೇ ತನ್ನ ಯಕೃತ್ನ ಭಾಗವನ್ನು ದಾನ ಮಾಡಲು ಮುಂದಾದರು. ಸಕಾಲದಲ್ಲಿ ಯಕೃತ್ ಸಿಕ್ಕ ಪರಿಣಾಮ ಅವರಿಗೆ ಯಶಸ್ವಿಯಾಗಿ ಕಸಿ ಮಾಡಲಾಯಿತು ಎಂದು ವಿವರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...