Saturday, April 11, 2026
Saturday, April 11, 2026

Indira Gandhi Morarji School Gopal ವ್ಯಾಯಾಮ ಯೋಗ ನಮ್ಮ ಉತ್ತಮ ಆರೋಗ್ಯಕ್ಕೆ ಸಹಕಾರಿ – ಎಂ.ಆರ್.ಬಸವರಾಜ್

Date:

Indira Gandhi Morarji School Gopal ಯಾವುದೇ ಕಾಯಿಲೆ ಇರಲಿ, ಆ ಕಾಯಿಲೆಯ ಬಗ್ಗೆ ನಾವು ಜಾಗೃತರಾಗಿರಬೇಕು. ಭಯ ಪಟ್ಟಾಗ ಆ ಕಾಯಿಲೆ ನಮ್ಮನ್ನು ಆವರಿಸಿಕೊಳ್ಳುತ್ತದೆ. ಉತ್ತಮವಾದ ಆರೋಗ್ಯ ಉತ್ತಮ ಜೀವನಶೈಲಿ ಆಹಾರ ಅಭ್ಯಾಸಗಳು ನಮ್ಮನ್ನು ರಕ್ಷಣೆ ಮಾಡುತ್ತವೆ ಎಂದು ಎಂ.ಆರ್.ಬಸವರಾಜ್ ಅಭಿಮತ ವ್ಯಕ್ತಪಡಿಸಿದರು.

ಇಂದಿರಾ ಗಾಂಧಿ ಮೊರಾರ್ಜಿ ಶಾಲೆ ಗೋಪಾಳ ಹಾಗೂ ಶರಾವತಿ ನಗರ ವೀಣಾ ಶಾರದಾ ಶಾಲೆಯಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ರಿವರ್ಸ್ ಸೈಡ್ ವತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ,
ಡೆಂಗ್ಯೂ ಹಾಗೂ ಮಲೇರಿಯಾ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ನಾವು ಸದಾ ಸಕಾರಾತ್ಮಕವಾಗಿರಬೇಕು. ದೈಹಿಕ ವ್ಯಾಯಾಮ ಯೋಗ ಪ್ರಾಣಾಯಾಮಗಳು ನಮ್ಮ ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗಿದೆ. ಮಕ್ಕಳು ಸದಾ ಚಟುವಟಿಕೆಯಿಂದ ಕೂಡಿರಬೇಕು. ವಿದ್ಯಾಭ್ಯಾಸ ಜೊತೆಗೆ ಆರೋಗ್ಯದ ಕಡೆಗೂ ಸಹ ಗಮನ ಹರಿಸಬೇಕು. ಸದೃಢ ವಿದ್ಯಾರ್ಥಿಗಳು ಸಮಾಜದ ಆಸ್ತಿ. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ನಡೆಸುವ ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಬೇಕು ಎಂದು ನುಡಿದರು.

Indira Gandhi Morarji School Gopal ಕಾರ್ಯಕ್ರಮದಲ್ಲಿ, ಕಾರ್ಯದರ್ಶಿ ಸಿ ಬಿ ವಿನಯ್, ಆರೋಗ್ಯ ಅಧಿಕಾರಿ ನಾರಾಯಣ್, ಝೆಡ್.ಎಲ್.ಸೋಮಶೇಖರ್, ಫಾಸ್ಟ್ ಎಜಿ ಜಗನ್ನಾಥ್.ಎಂ, ಫಾಸ್ಟ್ ಪ್ರೆಸಿಡೆಂಟ್ ದೇವೇಂದ್ರಪ್ಪ, ಇನ್ನರ್ವಿಲ್ ಅಧ್ಯಕ್ಷ ವಸಂತ ಬಸವರಾಜ್, ಫಾಸ್ಟ್ ಪ್ರೆಸಿಡೆಂಟ್ ಪ್ರತಿಮಾ ಡಾಕಪ್ಪಗೌಡ, ಶಾಲೆಯ ಮುಖ್ಯೋಪಾಧ್ಯಾಯರು, ಸಿಬ್ಬಂದಿ ವರ್ಗ ಹಾಗೂ ಮಕ್ಕಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಾಸಕರಿಗೆ ನೀಡುವ ಅನುದಾನದಲ್ಲಿ ಪ್ರತೀ ವರ್ಷ ₹10 ಲಕ್ಷ ವಿಶೇಷಚೇತನರ ಅಭಿವೃದ್ಧಿಗೆ ನೀಡುವೆ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ವಿಶೇಷಚೇತನರ ಸಾಧನೆಗಳು ಕೂಡ ವಿಶೇಷವಾಗಿದ್ದು, ಅವರ ಸಾಧನೆಗಳನ್ನು ಉತ್ತೇಜಿಸಿ,...

DC shivamogga ಹುಲಿಕಲ್ ಘಾಟಿ ಮಣ್ಣಿನ ಕುಸಿತ. ಮೃತ ಕಾರ್ಮಿಕರ ಕುಟುಂಬಗಳಿಗೆ ಡೀಸಿ ಪ್ರಭುಲಿಂಗ ಕವಳಿಕಟ್ಟಿ ಸಾಂತ್ವನ

DC shivamogga ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಬಾಳೆಬರೆ...

Mescom ಏಪ್ರಿಲ್ 12. ಶಿವಮೊಗ್ಗದ ವಿನಾಯಕ ನಗರ, ರವೀಂದ್ರ ನಗರ‌ ಸುತ್ತಮುತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Mescom ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ...