Wednesday, April 8, 2026
Wednesday, April 8, 2026

Rajya Bal Bhavan ಬಾಲ ಭವನದ ಮುಖಾಂತರ ನಿರಂತರ ಕಾರ್ಯಕ್ರಮ ನಡೆಸಲು ಅಧ್ಯಕ್ಷರ ಸೂಚನೆ

Date:

Rajya Bal Bhavan ರಾಜ್ಯ ಬಾಲಾಭವನ ಅಧ್ಯಕ್ಷ ಬಿ ಆರ್ ನಾಯ್ಡು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ ಕಾಂಗ್ರೆಸ್ ಮುಖಂಡ ಯೋಗೀಶ್ ರವರೊಂದಿಗೆ ರಾಜ್ಯ ಬಾಲ ಭವನ ಸೊಸೈಟಿಯ ಅನುದಾನದಲ್ಲಿ ಮಹಾತ್ಮಾ ಗಾಂಧಿ ಪಾರ್ಕ್ ನಲ್ಲಿ ನಡೆಯುತ್ತಿರುವ ಮಕ್ಕಳ ಪುಟಾಣಿ ರೈಲು, ಈಜು ಕೊಳ ನಿರ್ವಹಣೆ ಪರಿಶೀಲಿಸಿದರು.

ಇವುಗಳ ಉತ್ತಮ ನಿರ್ವಹಣೆ ಹಾಗೂ ಉನ್ನತಿಕರಣ ಬಗ್ಗೆ ಮಹಾ ನಗರ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಮಕ್ಕಳ ಉಪಯೋಗಕ್ಕೆ ಯೋಗ್ಯವಾಗುವಂತೆ ಪಾಲಿಕೆ, CSR ಅನುದಾನ ಬಳಸಿಕೊಳ್ಳಲು ಸೂಚಿಸಿದರು. ತದನಂತರ ಮಹಿಳಾ ಮತ್ತು ಮಕ್ಕಳ ಉಪ ನಿರ್ದೇಶಕರ ಕಚೇರಿಯಲ್ಲಿ ಬಾಲ ಭವನ ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿ ಜಿಲ್ಲಾ ಮತ್ತು ತಾಲ್ಲೂಕು ಬಾಲ ಭವನ ನಿರ್ಮಾಣ ಮಾಡಲು ಕನಿಷ್ಠ ಅರ್ಧ ಎಕರೆ ನಿವೇಶನ ರಾಜ್ಯ ಬಾಲ ಭವನ ಸೊಸೈಟಿ ಹೆಸರಿಗೆ ಜಿಲ್ಲಾಧಿಕಾರಿಯವರಿಂದ ಮಂಜೂರಾತಿ ಪಡೆಯಲು ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.

Rajya Bal Bhavan ಜಿಲ್ಲಾ ಬಾಲ ಭವನ ಕಾರ್ಯಕ್ರಮ ಸಂಯೋಜಕರ ಮೂಲಕ ನಿರಂತರವಾಗಿ ಕಾರ್ಯಕ್ರಮಗಳನ್ನು ಆಯೋಜಿಸಲು ತಿಳಿಸಿದರು. ಈ ಸಂದರ್ಭದಲ್ಲಿ ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಿ ಹೆಚ್ ಕೃಷ್ಣಪ್ಪ, ಇಲಾಖಾ ಅಧಿಕಾರಿಗಳು, ಮಹಾ ನಗರ ಪಾಲಿಕೆ, ಶಿಕ್ಷಣ, ಯುವ ಜನ ಕ್ರೀಡಾ ಇಲಾಖೆ, ಅಧಿಕಾರಿಗಳು ಹಾಜರಿದ್ದರು.

ನಂತರ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ಪರಿಶೀಲಿಸಿ ಇಲಾಖಾ ಸಂಕಿರ್ಣದಲ್ಲಿ ಬಾಲ ಭವನ ಆಡಿಟೋರಿಯಂ, ಮಕ್ಕಳ ಉದ್ಯಾನವನ ನಿರ್ಮಾಣ ಮಾಡುವ ಸಾಧ್ಯತೆ ಬಗ್ಗೆ ನಿವೇಶನಗಳ ಸ್ಥಳ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಹೊಸನಗರಕ್ಕೆ ಮೊದಲಿನ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ವಿವಿಧ ಮಠಾಧೀಶರು,...

ಶಾಲಾ ಮಕ್ಕಳಿಗೆಂದೇ “ಟಿ-5 ಚುಟುಕು ಕ್ರಿಕೆಟ್” ಪಂದ್ಯಾವಳಿ ಏರ್ಪಡಿಸಿ ಪ್ರೋತ್ಸಾಹಿಸಿ- ಡಾ.ಸುಧೀಂದ್ರ

DCA ಸಂಸ್ಥೆಯ 2026ರ ಸಾಲಿನ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ದಿನಾಂಕ...

Acharya Tulsi National College of Commerce ಮೇ1. ಎಟಿ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಗಳ ಸಮಾಗಮ

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮೇ 1ರಂದು ಬೆಳಗ್ಗೆ 10.30ಕ್ಕೆ...

Department of Agriculture ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯ ರಸಗೊಬ್ಬರ ಖರೀದಿಸಲು ಎಫ್ ಐ ಡಿ ಸಂಖ್ಯೆ ಕಡ್ಡಾಯ

ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್...