Monday, February 2, 2026
Monday, February 2, 2026

Wayanad landslides ವಯನಾಡು ಜಿಲ್ಲೆಯಲ್ಲಿ ಭೂಕುಸಿತ. ನೂರಕ್ಕೂ ಅಧಿಕ ಸಾವು. ಕೇರಳದಲ್ಲಿ ಶೋಕಾಚರಣೆ

Date:

Wayanad landslides ವಯನಾಡ್ ಜಿಲ್ಲೆಯಲ್ಲಿ ವಿವಿಧ ಭಾಗಗಳಲ್ಲಿ ಭೂಕುಸಿತ ಉಂಟಾಗಿ ಸುಮಾರು 100 ರಷ್ಟು ಜನರು ಸಾವನ್ನಪ್ಪಿರುವ ಹಿನ್ನೆಲೆ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಎರಡು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆಯನ್ನು ಘೋಷಿಸಿದ್ದಾರೆ

ಜುಲೈ 30 ಮಂಗಳವಾರ ಮತ್ತು ಜುಲೈ 31 ಬುಧವಾರದಂದು ಕೇರಳ ಸರ್ಕಾರ ಅಧಿಕೃತ ಶೋಕಾಚರಣೆಯನ್ನು ಘೋಷಿಸಿದೆ. ಈ ಸಂದರ್ಭ ರಾಜ್ಯದ ಎಲ್ಲಾ ಕಡೆಗಳಲ್ಲಿ ರಾಷ್ಟ್ರಧ್ವಜ ಅರ್ಧದಲ್ಲಿ ಹಾರಾಡಲಿದೆ. ಈ ಎರಡೂ ದಿನಗಳಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ಮತ್ತು ಇತರ ಆಚರಣೆಗಳನ್ನು ಮುಂದೂಡಲಾಗಿದೆ.

ಸಂಜೆ 6 ಗಂಟೆ ವೇಳೆಗೆ ವಯನಾಡ್ ದುರಂತದಲ್ಲಿ ಮೃತರ ಸಂಖ್ಯೆ 93ಕ್ಕೆ ತಲುಪಿತ್ತು.128 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು 98 ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿತ್ತು.

Wayanad landslides ವರದಿಗಳ ಪ್ರಕಾರ ಸದ್ಯ ದುರಂತ ನಡೆದ ಸ್ಥಳಗಳಲ್ಲಿ ಒಂದಾದ ಮುಂಡಕ್ಕೈನಲ್ಲಿ ಎನ್‌ಡಿಆರ್‌ಎಫ್‌ನ 20 ಸದಸ್ಯರ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಭೂಕುಸಿತ ಸಂತ್ರಸ್ತರಿಗೆ ಆಹಾರ ಮತ್ತು ಇತರ ಸಾಮಗ್ರಿಗಳ ಪೂರೈಕೆಗೆ ರಾಜ್ಯದ ನಾಗರಿಕ ಸರಬರಾಜು ಇಲಾಖೆ ಕ್ರಮಕೈಗೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...