Monday, February 2, 2026
Monday, February 2, 2026

Press Day ಕಷ್ಟದ ಸಮಯದಲ್ಲೂ ಪತ್ರಿಕಾ ಧರ್ಮ ಬಿಡಬಾರದು-ಕೃಷ್ಣಮೂರ್ತಿ ಹೆಬ್ಬಾರ್

Date:

Press Day ಭದ್ರಾವತಿಯ ಭೂಮಿಕ ವತಿಯಿಂದ ತರೀಕೆರೆ ರಸ್ತೆಯ ನಯನ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಹೊನ್ನಾವರದ ನಾಗರಿಕ ಪತ್ರಿಕೆಯ ಪ್ರಕಾಶಕ ಸಂಪಾದಕರಾದ ಶ್ರೀ ಕೃಷ್ಣಮೂರ್ತಿ ಹೆಬ್ಬಾರ್ ಅವರು ಆಗಮಿಸಿದ್ದರು. ಅವರು “ಕವಲು ದಾರಿಯಲ್ಲಿ ಪತ್ರಿಕೋದ್ಯಮ ” ಎಂಬ ವಿಷಯವಾಗಿ ಮಾತನಾಡುತ್ತಾ ಎಂತಹ ಕಷ್ಟ ಸಮಯದಲ್ಲಿ ಕೂಡ ಪತ್ರಿಕಾ ಧರ್ಮವನ್ನು ಬಿಡಬಾರದೆಂದು ಪತ್ರಕರ್ತರಿಗೆ ತಿಳಿಸಿದರು.
Press Day ವಿಶೇಷ ಆಹ್ವಾನಿತರಾಗಿ ಭದ್ರಾವತಿಯ ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಕಣ್ಣಪ್ಪನವರು ಆಗಮಿಸಿದ್ದರು . ಶ್ರೀಯುತ ಕಣ್ಣಪ್ಪನವರು ಮಾತನಾಡುತ್ತಾ ಪತ್ರಕರ್ತರು ಈಗಿನ ಸಮಯದಲ್ಲಿ ಎದುರಿಸಬೇಕಾದ ಕಷ್ಟಗಳು ಹಾಗೂ ಪತ್ರಿಕೆಗಳನ್ನು ನಡೆಸಲು ಆಗುತ್ತಿರುವ ತೊಂದರೆಗಳನ್ನು ವಿವರಿಸಿದರು. ಭೂಮಿಕಾ ಅಧ್ಯಕ್ಷರಾದ ಡಾಕ್ಟರ್ ಕೃಷ್ಣ ಎಸ್ ಭಟ್ ರವರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಭೂಮಿಕಾ ವತಿಯಿಂದ ಶ್ರೀ ಕೃಷ್ಣಮೂರ್ತಿ ಹೆಬ್ಬಾರ್ ಹಾಗೂ ಶ್ರೀ ಕಣ್ಣಪ್ಪ ರವರಿಗೆ ಸನ್ಮಾನಿಸಲಾಯಿತು. ಪ್ರಾರಂಭದಲ್ಲಿ ವೇದ ಶೇಷಾದ್ರಿ ಹಾಗೂ ಶ್ರೀಮತಿ ಲೀಲಾವರಿಂದ ಪ್ರಾರ್ಥನೆ ಡಾಕ್ಟರ್ ವೀಣಾ ಭಟ್ಟ ರವರಿಂದ ಸ್ವಾಗತ ಶ್ರೀ ಕೆ ಆನಂದ್ ಹಾಗೂ ಅಪರಂಜಿ ಶಿವರಾಜ್ ರವರು ಅತಿಥಿಗಳ ಪರಿಚಯ ಮಾಡಿಕೊಟ್ಟರು. ಮುನಿರಾಜುರವರು ವಂದನಾರ್ಪಣೆ ಮಾಡಿದರು. ಶ್ರೀಮತಿ ಶಾರದಾ ಶ್ರೀನಿವಾಸ್ ರವರು ಕಾರ್ಯಕ್ರಮ ನಿರೂಪಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...