Tuesday, May 5, 2026
Tuesday, May 5, 2026

Vishvesvaraya Jala Nigam Ltd ಭದ್ರಾ ನೀರುಬಿಡುಗಡೆ ಮೇಲ್ದಂಡೆ ಕಾಲುವೆಯ ಪ್ರದೇಶಗಳ ಜನರಿಗೆ ಮುಂಜಾಗ್ರತೆಗೆ ಸೂಚನೆ

Date:

Vishvesvaraya Jala Nigam Ltd ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಅಡಿಯಲ್ಲಿ ಬರುವ ಭದ್ರಾ ಮೇಲ್ದಂಡೆ ಯೋಜನೆ ಕಾಲುವೆಯ ಭದ್ರಾ ಜಲಾಶಯದಿಂದ ಪ್ರಾರಂಭವಾಗಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ, ತರೀಕೆರೆ ಕಸಬಾ, ಅಮೃತಾಪುರ, ಅಜ್ಜಂಪುರ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಹಾದು ಹೋಗಿದ್ದು, ಸರ್ಕಾರದ ನಿರ್ದೇಶನದಂತೆ ದಿ: 31-07-2024 ರಿಂದ ಶಾಂತಿಪುರ ಪಂಪ್‌ಹೌಸ್-1, ಜಂಭದಹಳ್ಳ ಅಕ್ವೆಡಕ್ಟ್, ತರೀಕೆರೆ ರೈಲು ಸೇತುವೆ, ಬೆಟ್ಟತಾವರೆಕೆರೆ ಪಂಪ್‌ಹೌಸ್-2 ಅಜ್ಜಂಪುರ ಸುರಂಗದ ಮಾರ್ಗವಾಗಿ ಹೆಬ್ಬೂರು ಗ್ರಾಮದ ಹತ್ತಿರವಿರುವ ವೈ-ಜಂಕ್ಷನ್‌ನಿಂದ ಹೆಬ್ಬೂರು, ಕಾಟಿನಗೆರೆ, ಬೆಣಕುಣಸೆ, ಮುಗಳಿ, ಬೇಗೂರು, ಆಸಂದಿ, ಹಡಗಲು, ಕಲ್ಕೆರೆ, ಹೆಚ್.ತಿಮ್ಮಾಪುರ, ಕಲ್ಲಹಳ್ಳಿ, ಚಿಕ್ಕಬಳ್ಳೇಕೆರೆ, ಹನುಮನಹಳ್ಳಿ, ಚೌಳಹಿರಿಯೂರು ಮತ್ತು ಹಿ. ತಿಮ್ಮಾಮರ ಗ್ರಾಮಮಗಳ ಮಾರ್ಗವಾಗಿ ವೇದಾವತಿ ನದಿಗೆ ಸೇರುವ ಹಳ್ಳದ ಮುಖಾಂತರ ವಾಣಿ ವಿಲಾಸ ಸಾಗರಕ್ಕೆ ನೀರನ್ನು ಹರಿಸಲಾಗಿದೆ.
Vishvesvaraya Jala Nigam Ltd ಆದ್ದರಿಂದ, ಸಾರ್ವಜನಿಕರ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಕಾಲುವೆ ಹಾಗೂ ಹಳ್ಳದ ಪಾತ್ರಗಳಲ್ಲಿ ಸಾರ್ವಜನಿಕರು ತಿರುಗಾಡುವುದು, ಜನ ಜಾನುವಾರುಗಳನ್ನು ಕಾಲುವೆ ಒಳಗಡೆ ಬಿಡುವುದು ಹಾಗೂ ಇತರೆ ಚಟುವಟಿಕೆಗಳನ್ನು ಮಾಡುವುದು ನಿಷೇಧಿಸಲಾಗಿದೆ.
ಈ ಸೂಚನೆಗಳನ್ನು ಉಲ್ಲಂಘಿಸುವುದು, ನಿಗಮದ ಆಸ್ತಿಯಾದ ನೀರಾವರಿ ಕಾಲುವೆ, ಕಟ್ಟಡಗಳನ್ನು ಜಖಂಗೊಳಿಸುವುದು, ಅನಧಿಕೃತವಾಗಿ ಪಂಪ್‌ಸೆಟ್‌ಗಳನ್ನು ಅಳವಡಿಸಿ ನೀರನ್ನು ಎತ್ತುವುದು ನೀರಾವರಿ ಕಾಯ್ದೆಯ ವಿವಿಧ ನಿಯಮಗಳ ಪ್ರಕಾರ ಕಾನೂನು ಬಾಹಿರಬಾಗಿದ್ದು, ಇದನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಾರ್ವಜನಿಕರ ಗಮನಕ್ಕೆ ತರಲಾಗಿದೆ ಎಂದು ಸುಪರಿಂಟೆಂಡಿಂಗ್ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...